2:29 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕನ್ನಡಿಗರ ರಕ್ಷಣೆಗೆ ಕೇಂದ್ರದ ಜತೆ ಮಾತುಕತೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

03/03/2026, 18:44

ಬೆಂಗಳೂರು(reporterkarnataka.com): ಅಮೆರಿಕ, ಇಸ್ರೇಲ್ – ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈಯಲ್ಲಿ ಸಿಲುಕಿ ಆತಂಕದಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಇಂದು ಮಾತನಾಡಿ ಅವರಿಗೆ ಧೈರ್ಯ ತುಂಬಿದರು.

ಸಂಕಷ್ಟದಲ್ಲಿ ಸಿಲುಕಿದ ಕನ್ನಡಿಗರನ್ನು ತಕ್ಷಣ ಕರ್ನಾಟಕಕ್ಕೆ ಕರೆದುಕೊಂಡು ಬರಲು ಕೇಂದ್ರ ಸರಕಾರದ ಜೊತೆ ಮಾತನಾಡುತ್ತೇನೆಂದು ಅವರು ಭರವಸೆ ನೀಡಿದರು. ಪ್ರಶಸ್ತಿ ಪಡೆಯಲೆಂದು ಒಟ್ಟು 61 ಜನರ ತಂಡವು ತೆರಳಿದ್ದು, ದುಬೈಯಲ್ಲಿ ವಾಸ್ತವ್ಯ ಇರುವುದಾಗಿ ತಂಡದವರು ನುಡಿದರು.
ಅರಸೀಕೆರೆಯ 5 ಜನರೂ ಇವರ ಜೊತೆಗೆ ಇರುವುದಾಗಿ ಹಾಗೂ ಹೋಟೆಲ್ ಒಂದರಲ್ಲಿ ತಂಗಿರುವುದಾಗಿ ಅವರು ಆತಂಕವನ್ನು ಹಂಚಿಕೊಂಡರು. ಇದೀಗ 7ನೇ ದಿನ ತಲುಪಿದೆ. ಇವತ್ತು ರಾತ್ರಿ ಇದ್ದ ವಿಮಾನವೂ ರದ್ದಾಗಿದೆ ಎಂದು ವಿವರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಇದರ ಸಂಬಂಧ ಆದ್ಯ ಗಮನ ಕೊಟ್ಟಿದ್ದಾರೆ. ಹಿಂದೆ ಉಕ್ರೇನ್‍ನಲ್ಲಿ ಇಂಥ ಸಮಸ್ಯೆ ಆದಾಗ ಕೇಂದ್ರ ಸರಕಾರವು ಅದನ್ನು ಬಗೆಹರಿಸಿತ್ತು. ಅಲ್ಲಿ ಸಿಲುಕಿದ್ದವರನ್ನು ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗಿತ್ತು. ಈ ಯುದ್ಧ ಅಚಾನಕ್ ಆಗಿ ಆರಂಭವಾಗಿದೆ. ದೆಹಲಿಯ ಸಂಬಂಧಿತರ ಜೊತೆ ನಾನು ಕೂಡ ಮಾತನಾಡುವೆ ಎಂದು ವಿಜಯೇಂದ್ರ ಅವರು ಧೈರ್ಯ ತುಂಬಿದರು. ತಂಡವು ಸುರಕ್ಷಿತವಾಗಿ ವಾಪಸ್ ಬರಲು ಕ್ರಮ ಕೈಗೊಳ್ಳುವಂತೆ ಕೋರುವುದಾಗಿ ತಿಳಿಸಿದರು. ಆತಂಕಗೊಳ್ಳದಿರಿ; ನೀವೆಲ್ಲರೂ ಸುರಕ್ಷಿತವಾಗಿ ವಾಪಸ್ ಬರಲು ಕ್ರಮ ಕೈಗೊಳ್ಳಲು ಕೋರಲಿದ್ದೇನೆ ಎಂದು ಧೈರ್ಯ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು