7:46 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ತಾಲೂಕು ಅಧ್ಯಕ್ಷರ ನೇಮಕ‌ ವಿಚಾರ: ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ; ತಾಪಂ ಮಾಜಿ ಅಧ್ಯಕ್ಷರ ಮೇಲೆ ಹಲ್ಲೆ

09/02/2024, 21:28

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ
ಭುಗಿಲೆದ್ದಿದೆ. ತಾಲೂಕಿನ ವಿವಿಧ ಮಂಡಲ, ಮೋರ್ಚಾ ಅಧ್ಯಕ್ಷರ ನೇಮಕ ವಿಚಾರದಲ್ಲಿ ಅಸಮಾಧಾನ ತಾರಕ್ಕೇರಿದೆ.
ಮೂಡಿಗೆರೆ ತಾಲೂಕು ಅಧ್ಯಕ್ಷರ ನೇಮಕ ವಿಚಾರದಲ್ಲಿ ಬಿಜೆಪಿ ಜಗಳ ಇದೀಗ ಬೀದಿಗೆ ಬಂದಿದೆ.
ತಾಲೂಕು ಅಧ್ಯಕ್ಷರ ಕಣದಲ್ಲಿ 12 ಜನ ಆಕಾಂಕ್ಷಿಗಳಿದ್ದರು.
ನೂತನ ಅಧ್ಯಕ್ಷರ ಹೆಸರು ಘೋಷಣೆ ಆಗುತ್ತಿದ್ದಂತೆ ಅಸಮಾಧಾನ ಸ್ಫೋಟಗೊಂಡಿದೆ.


ಮೂಡಿಗೆರೆ ತಾಲೂಕಿನ ಬಿಜೆಪಿ ಅಧ್ಯಕ್ಷರಾಗಿ ಟಿ.ಎಂ.ಗಜೇಂದ್ರ ಆಯ್ಕೆಗೊಂಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಅವರು ನೇಮಕದ ಆದೇಶ ಹೊರಡಿಸಿದ್ದಾರೆ.
ಈ ನಡುವೆ ತಾಲೂಕು ಪಂಚಾಯಿತಿ‌ ಮಾಜಿ ಅಧ್ಯಕ್ಷ ಕೆ.ಸಿ.ರತನ್ ಮೇಲೆ ಹಲ್ಲೆ ನಡೆಸಲಾಗಿದೆ. ಕೆ.ಸಿ.ರತನ್ ಹಸ್ತ ಕ್ಷೇಪದಿಂದ ಅಧ್ಯಕ್ಷ ಸ್ಥಾನ ಕೈತಪ್ಪಿದೆ ಎಂದು ಹಲ್ಲೆ ನಡೆದಿದೆ.
ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಪುಟ್ಟಣ್ಣ ಹಾಗೂ ಮತ್ತೋರ್ವ ಆಕಾಂಕ್ಷಿ ಭರತ್ ರಿಂದ ಹಲ್ಲೆ ಆರೋಪ.
ತೀವ್ರ ಹಲ್ಲೆಗೆ ಒಳಗಾಗಿರುವ ಕೆ.ಸಿ. ರತನ್ ಅವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು