2:33 AM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ತಲ್ವಾರ್ ದಾಳಿ ಯತ್ನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮೊದಲ ಪ್ರತಿಕ್ರಿಯೆ ಏನು?

14/10/2022, 18:24

ಮಂಗಳೂರು(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ತಲ್ವಾರ್ ದಾಳಿ ಯತ್ನದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದರೆ ಅವರು ಏನು ಹೇಳಿದ್ದಾರೆ ಕೇಳೋಣ ಬನ್ನಿ…

ಬೆಂಗಳೂರಿನಿಂದ ಗುರುವಾರ ರಾತ್ರಿ ನಾನು ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದ ವೇಳೆ ಫರಂಗಿಪೇಟೆ ಸಮೀಪ ಸ್ಕಾರ್ಪಿಯೊ ವಾಹನ ಓವರ್ ಟೇಕ್ ಮಾಡಿ ನನ್ನ ಸರಕಾರಿ ಕಾರಿಗೆ ಎರಡು ಬಾರಿ ತಲ್ವಾರ್ ದಾಳಿ ಮಾಡಲಾಯಿತು.

ನಾನು ಸ್ನೇಹಿತನ ಐ20 ಕಾರಿನಲ್ಲಿದ್ದೆ, ನಾನು ಸರಕಾರಿ ಕಾರಿನಲ್ಲಿ ಇಲ್ಲ ಎಂದು ಗೊತ್ತಾದ ಮೇಲೆ ಐ20 ಕಾರಿ‌ನ ಮೇಲೆ ದಾಳಿ ಮಾಡಿದ್ದಾನೆ. ಕಾರಿನಲ್ಲಿ ಒಬ್ಬನೇ ಇದ್ದು, ಡ್ರೈವ್ ಮಾಡಿಕೊಂಡು ಎರಡು ಬಾರಿ ತಲವಾರು ದಾಳಿಗೆ ಯತ್ನಿಸಿದ್ದ, ಹಾಗೆ ಕಾರಿನಿಂದ ಇಳಿಯಲು ಯತ್ನಿಸಿದ್ದ ಎಂದು ಶಾಸಕರು ಹೇಳಿದ್ದಾರೆ.

ದಾಳಿಗೆ ಬಳಸಿದ ಕಾರು ಕೇರಳ ರಿಜಿಸ್ಟ್ರೇಷನ್ ಹೊಂದಿತ್ತು. ಯಶಸ್ವಿ ಹಾಲ್ ಬಳಿಕ ನಾನು ಡಿವೈಎಸ್ಪಿಗೆ ಮಾಹಿತಿ ನೀಡಿದ್ದೆ.ಬಳಿಕ ಎರಡು ಪ್ಯಾಸೆಂಜರ್ ಕಾರಿನ ಜೊತೆ ತಲವಾರು ದಾಳಿಗೆ ಉತ್ನಿಸಿದವನ ಕಾರು ತೆರಳಿದೆ ಎಂದು ಹೇಳಿದ್ದಾರೆ.

ದಾಳಿ ಕುರಿತು ಗೃಹ ಸಚಿವರಿಗೆ ಮಾಹಿತಿ ನೀಡಿದ್ದೇನೆ. ಎರಡೆರಡು ಬಾರಿ ಅವರು ಕರೆ ಮಾಡಿದ್ದಾರೆ. ಗನ್ ಮ್ಯಾನ್ ನೀಡುವುದಾಗಿ ಹೇಳಿದ್ದಾರೆ. ಈ ಕುರಿತು ಸಮಗ್ರ ತನಿಖೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಮುಂಜಾನೆ 2 ಗಂಟೆಗೆ ಕೇಸ್ ದಾಖಲು ಮಾಡಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ಗೃಹ ಸಚಿವರು ನೀಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿ, ನನಗೆ ಅಂಗರಕ್ಷಕರನ್ನು ನೀಡಲು ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು