2:30 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್…

ಇತ್ತೀಚಿನ ಸುದ್ದಿ

ತಲ್ವಾರ್ ದಾಳಿ ಯತ್ನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮೊದಲ ಪ್ರತಿಕ್ರಿಯೆ ಏನು?

14/10/2022, 18:24

ಮಂಗಳೂರು(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ತಲ್ವಾರ್ ದಾಳಿ ಯತ್ನದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದರೆ ಅವರು ಏನು ಹೇಳಿದ್ದಾರೆ ಕೇಳೋಣ ಬನ್ನಿ…

ಬೆಂಗಳೂರಿನಿಂದ ಗುರುವಾರ ರಾತ್ರಿ ನಾನು ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದ ವೇಳೆ ಫರಂಗಿಪೇಟೆ ಸಮೀಪ ಸ್ಕಾರ್ಪಿಯೊ ವಾಹನ ಓವರ್ ಟೇಕ್ ಮಾಡಿ ನನ್ನ ಸರಕಾರಿ ಕಾರಿಗೆ ಎರಡು ಬಾರಿ ತಲ್ವಾರ್ ದಾಳಿ ಮಾಡಲಾಯಿತು.

ನಾನು ಸ್ನೇಹಿತನ ಐ20 ಕಾರಿನಲ್ಲಿದ್ದೆ, ನಾನು ಸರಕಾರಿ ಕಾರಿನಲ್ಲಿ ಇಲ್ಲ ಎಂದು ಗೊತ್ತಾದ ಮೇಲೆ ಐ20 ಕಾರಿ‌ನ ಮೇಲೆ ದಾಳಿ ಮಾಡಿದ್ದಾನೆ. ಕಾರಿನಲ್ಲಿ ಒಬ್ಬನೇ ಇದ್ದು, ಡ್ರೈವ್ ಮಾಡಿಕೊಂಡು ಎರಡು ಬಾರಿ ತಲವಾರು ದಾಳಿಗೆ ಯತ್ನಿಸಿದ್ದ, ಹಾಗೆ ಕಾರಿನಿಂದ ಇಳಿಯಲು ಯತ್ನಿಸಿದ್ದ ಎಂದು ಶಾಸಕರು ಹೇಳಿದ್ದಾರೆ.

ದಾಳಿಗೆ ಬಳಸಿದ ಕಾರು ಕೇರಳ ರಿಜಿಸ್ಟ್ರೇಷನ್ ಹೊಂದಿತ್ತು. ಯಶಸ್ವಿ ಹಾಲ್ ಬಳಿಕ ನಾನು ಡಿವೈಎಸ್ಪಿಗೆ ಮಾಹಿತಿ ನೀಡಿದ್ದೆ.ಬಳಿಕ ಎರಡು ಪ್ಯಾಸೆಂಜರ್ ಕಾರಿನ ಜೊತೆ ತಲವಾರು ದಾಳಿಗೆ ಉತ್ನಿಸಿದವನ ಕಾರು ತೆರಳಿದೆ ಎಂದು ಹೇಳಿದ್ದಾರೆ.

ದಾಳಿ ಕುರಿತು ಗೃಹ ಸಚಿವರಿಗೆ ಮಾಹಿತಿ ನೀಡಿದ್ದೇನೆ. ಎರಡೆರಡು ಬಾರಿ ಅವರು ಕರೆ ಮಾಡಿದ್ದಾರೆ. ಗನ್ ಮ್ಯಾನ್ ನೀಡುವುದಾಗಿ ಹೇಳಿದ್ದಾರೆ. ಈ ಕುರಿತು ಸಮಗ್ರ ತನಿಖೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಮುಂಜಾನೆ 2 ಗಂಟೆಗೆ ಕೇಸ್ ದಾಖಲು ಮಾಡಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ಗೃಹ ಸಚಿವರು ನೀಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿ, ನನಗೆ ಅಂಗರಕ್ಷಕರನ್ನು ನೀಡಲು ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು