4:32 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ತಲ್ವಾರ್ ದಾಳಿ ಯತ್ನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮೊದಲ ಪ್ರತಿಕ್ರಿಯೆ ಏನು?

14/10/2022, 18:24

ಮಂಗಳೂರು(reporterkarnataka.com): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ತಲ್ವಾರ್ ದಾಳಿ ಯತ್ನದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದರೆ ಅವರು ಏನು ಹೇಳಿದ್ದಾರೆ ಕೇಳೋಣ ಬನ್ನಿ…

ಬೆಂಗಳೂರಿನಿಂದ ಗುರುವಾರ ರಾತ್ರಿ ನಾನು ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದ ವೇಳೆ ಫರಂಗಿಪೇಟೆ ಸಮೀಪ ಸ್ಕಾರ್ಪಿಯೊ ವಾಹನ ಓವರ್ ಟೇಕ್ ಮಾಡಿ ನನ್ನ ಸರಕಾರಿ ಕಾರಿಗೆ ಎರಡು ಬಾರಿ ತಲ್ವಾರ್ ದಾಳಿ ಮಾಡಲಾಯಿತು.

ನಾನು ಸ್ನೇಹಿತನ ಐ20 ಕಾರಿನಲ್ಲಿದ್ದೆ, ನಾನು ಸರಕಾರಿ ಕಾರಿನಲ್ಲಿ ಇಲ್ಲ ಎಂದು ಗೊತ್ತಾದ ಮೇಲೆ ಐ20 ಕಾರಿ‌ನ ಮೇಲೆ ದಾಳಿ ಮಾಡಿದ್ದಾನೆ. ಕಾರಿನಲ್ಲಿ ಒಬ್ಬನೇ ಇದ್ದು, ಡ್ರೈವ್ ಮಾಡಿಕೊಂಡು ಎರಡು ಬಾರಿ ತಲವಾರು ದಾಳಿಗೆ ಯತ್ನಿಸಿದ್ದ, ಹಾಗೆ ಕಾರಿನಿಂದ ಇಳಿಯಲು ಯತ್ನಿಸಿದ್ದ ಎಂದು ಶಾಸಕರು ಹೇಳಿದ್ದಾರೆ.

ದಾಳಿಗೆ ಬಳಸಿದ ಕಾರು ಕೇರಳ ರಿಜಿಸ್ಟ್ರೇಷನ್ ಹೊಂದಿತ್ತು. ಯಶಸ್ವಿ ಹಾಲ್ ಬಳಿಕ ನಾನು ಡಿವೈಎಸ್ಪಿಗೆ ಮಾಹಿತಿ ನೀಡಿದ್ದೆ.ಬಳಿಕ ಎರಡು ಪ್ಯಾಸೆಂಜರ್ ಕಾರಿನ ಜೊತೆ ತಲವಾರು ದಾಳಿಗೆ ಉತ್ನಿಸಿದವನ ಕಾರು ತೆರಳಿದೆ ಎಂದು ಹೇಳಿದ್ದಾರೆ.

ದಾಳಿ ಕುರಿತು ಗೃಹ ಸಚಿವರಿಗೆ ಮಾಹಿತಿ ನೀಡಿದ್ದೇನೆ. ಎರಡೆರಡು ಬಾರಿ ಅವರು ಕರೆ ಮಾಡಿದ್ದಾರೆ. ಗನ್ ಮ್ಯಾನ್ ನೀಡುವುದಾಗಿ ಹೇಳಿದ್ದಾರೆ. ಈ ಕುರಿತು ಸಮಗ್ರ ತನಿಖೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಮುಂಜಾನೆ 2 ಗಂಟೆಗೆ ಕೇಸ್ ದಾಖಲು ಮಾಡಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ಗೃಹ ಸಚಿವರು ನೀಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿ, ನನಗೆ ಅಂಗರಕ್ಷಕರನ್ನು ನೀಡಲು ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು