10:52 PM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ತಂಬಾಕು ಮಾರಾಟ: ಪಾಲಿಕೆ ಅಧಿಕಾರಿಗಳ ತಂಡದಿಂದ ದಿಢೀರ್ ಕಾರ್ಯಾಚರಣೆ; 32 ಪ್ರಕರಣ ದಾಖಲು

23/01/2023, 17:53

ಮಂಗಳೂರು(reporterkarnataka.com) ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳ ತಂಡ ಸೋಮವಾರ ನಗರದ ವಿವಿಧೆಡೆ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ 32 ಪ್ರಕರಣಗಳನ್ನು ದಾಖಲಿಸಿವೆ.


ಏಕಕಾಲದಲ್ಲಿ ನಗರದ ಬಿಜೈ ಹಾಗೂ ಕೆಎಸ್ಸಾರ್ಟಿಸಿ ಬಸ್ ಸ್ಟಾಂಡ್ ಮುಂಭಾಗದಲ್ಲಿ ಪ್ಲಾಸ್ಟಿಕ್ ಮತ್ತು ತಂಬಾಕು ನಿಯಂತ್ರಣ ಕಾರ್ಯಾಚರಣೆ ನಡೆಸಲಾಯಿತು. ಅಧಿಕಾರಿಗಳು ಸ್ಥಳದಲ್ಲಿಯೇ 32 ಪ್ರಕರಣ ದಾಖಲಿಸಿ 4 ಸಾವಿರ ರೂ. ದಂಡ ಸಂಗ್ರಹಿಸಲಾಯಿತು. ಸೆಕ್ಷನ್ 5ರ ಆಡಿ ನಾಲ್ಕು ನಾಮಫಲಕ ತೆರವುಗೊಳಿಸಲಾಯಿತು.

ಅಂಗಡಿಗಳಿಗೆ ಎಚ್ಚರಿಕೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಸಾಕಷ್ಟು ಪ್ಲಾಸ್ಟಿಕ್ ವಸ್ತುಗಳನ್ನು ವಶ ಪಡೆದು ಎಚ್ಚರಿಕೆ ನೀಡಿದರು.
ಕಾರ್ಯಾಚರಣೆಯಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳಾದ ಜಯಶಂಕರ್, ಭಾಸ್ಕರ್, ಅಶ್ವಿನಿ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪುಂಡಲೀಕ ಲಕಾಟಿ, ಶೃತಿ ಸಾಲಿಯಾನ್ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು