2:35 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ತಂದೆಯನ್ನೇ ಕೊಲೆ ಮಾಡಿದ ಪಾಪಿ ಮಗ: ಕಳ್ಳತನ ಮಾಡಬೇಡ ಎಂದು ಬುದ್ದಿಮಾತು ಹೇಳಿದಕ್ಕೆ ಹೇಯ ಕೃತ್ಯ

25/01/2022, 18:21

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ನಾಯಕನಹಟ್ಟಿ ಠಾಣೆಯ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ಬುದ್ದಿ ಹೇಳಿದ ತಂದೆಯನ್ನೇ ಮಗ ಕೊಲೆ ಮಾಡಿದ ಘಟನೆ ನಡೆದಿದೆ.

ಮಲ್ಲೂರಹಳ್ಳಿ ಗ್ರಾಮದ ಬರಮಸಾಗರ ಕೊಪ್ಲೆಯ ಗುಡ್ಲು ಮಲ್ಲಯ್ಯ(65) ಎಂಬವರು ತನ್ನ ಪುತ್ರ ಲೋಕೇಶ್(35) ಎಂಬಾತನಿಗೆ ಕಳ್ಳತನ, ಜಗಳ ಮಾಡಬೇಡ. ಬರೀ ನಿನ್ನ ಮೇಲೆ ಆರೋಪಗಳು ಬರುತ್ತಿವೆ ಎಂದು ಬುದ್ದಿ ಮಾತು ಹೇಳಿದ್ದರು. ಇದರಿಂದ ಕೋಪಗೊಂಡ ಮಗ ಸೋಮವಾರ ರಾತ್ರಿ 12 ಗಂಟೆ ವೇಳೆಗೆ ಹೊಡೆದು ತಂದೆಯನ್ನು ಕೊಲೆ ಮಾಡಿದ್ದಾನೆ.

ಲೋಕೇಶ್ ಮೇಲೆ ರೈತರ ಎತ್ತುಗಳ ಕಳವು ಪ್ರಕರಣ ಸೇರಿದಂತೆ ಹಲವು ಕಳ್ಳತನ ಪ್ರಕರಣಗಳಿದ್ದು ಗುಂತಕೋಲಮ್ಮನಹಳ್ಳಿ ಗ್ರಾಮದಲ್ಲಿ ರೈತರ ಎತ್ತುಗಳ ಕಳವು ಪ್ರಕರಣದಲ್ಲಿ ಆರೋಪಿ ಲೋಕೇಶ್ ತಪ್ಪಿಸಿಕೊಂಡು ಜಾಮೀನು ಪಡೆದು ಹೊರ ಬಂದಿದ್ದ ಎನ್ನಲಾಗಿದೆ. ಕಳ್ಳತನ ಮಾಡಬೇಡ ಎಂದು ತಂದೆ ಬುದ್ದಿ ಹೇಳಿದ್ದಕ್ಕೆ ಹೊಡೆದು ಕೊಲೆ ಮಾಡಿದ್ದಾನೆ.

ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್ಪಿ ಕುಮಾರಸ್ವಾಮಿ, ಡಿವೈಎಸ್ಪಿ ಕೆ.ವಿ.ಶ್ರೀಧರ್ , ವೃತ್ತ ನಿರೀಕ್ಷಕ ರಮಕಾಂತ ಪಿ.ಎಸ್.ಐ ಮಹೇಶ ಲಕ್ಷ್ಮಣ ಹೊಸಪೇಟೆ ಭೇಟಿ  ನೀಡಿ ನಾಯಕನಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಲೋಕೇಶ್ ನನ್ನು ಫೋಲಿಸರು  ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು