8:06 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ತನಿಖೆಯ ಅಗತ್ಯವಿಲ್ಲ, ಆಡಿಯೋ ನಳಿನ್ ಅವರದ್ದೇ ಎನ್ನುವುದರಲ್ಲಿ ಎರಡು ಮಾತಿಲ್ಲ: ಹೀಗೆಂತ ಹೇಳಿದರೇ ಸಿಎಂ ಯಡಿಯೂರಪ್ಪ? 

20/07/2021, 18:30

ಬೆಂಗಳೂರು(reporterkarnataka news): ತನಿಖೆ ನಡೆಸುವ ಅಗತ್ಯವೇ ಇಲ್ಲ, ಆ ಆಡಿಯೋ ನಳಿನ್ ಕುಮಾರ್ ಕಟೀಲ್ ಅವರದ್ದೇ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ ಎನ್ನಲಾಗಿದೆ.

ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಸೋಮವಾರ ಸಂಜೆ ತನ್ನ ಆಪ್ತ ಸಚಿವರು ಹಾಗೂ ಮುಖಂಡರ ಜತೆ ಸಭೆ ನಡೆಸಿದ ಮುಖ್ಯಮಂತ್ರಿಯವರು ಈ ಸಂದರ್ಭದಲ್ಲಿ ಆಡಿಯೋ ಕುರಿತು ಮಾತನಾಡಿದ್ದಾರೆ ಎನ್ನಲಾಗಿದೆ.

ಆ ಆಡಿಯೋ ಆತನದ್ದೇ. ಅದರಲ್ಲಿ ಎರಡು ಮಾತಿಲ್ಲ. ತನಿಖೆ ನಡೆಸುವ ಅಗತ್ಯವೇ ಇಲ್ಲ ಎಂದು ಆಪ್ತರ ಜತೆಗಿನ ಸಭೆಯಲ್ಲಿ ಯಡಿಯೂರಪ್ಪ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರದ್ದು ಎನ್ನಲಾದ ಆಡಿಯೋ ಬಹಿರಂಗಗೊಂಡು ರಾಜ್ಯ ಬಿಜೆಪಿಯಲ್ಲಿ ಮತ್ತೊಮ್ಮೆ ಭಾರಿ ಸಂಚಲನ ಮೂಡಿಸಿತ್ತು. ನಳಿನ್  ಅವರು ತಮ್ಮ ಅಪ್ತರ ಜತೆ ತುಳು ಭಾಷೆಯಲ್ಲಿ ನಡೆಸಿದ ಸಂಭಾಷಣೆಯ ತುಣುಕು ವೈರಲ್ ಆಗಿತ್ತು.

ನಳಿನ್‌ ಅವರು ತುಳುವಿನಲ್ಲಿ ಸಂಭಾಷಣೆ ನಡೆಸುತ್ತಾ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪದಚ್ಯುತಿಯ ಸುಳಿವು ನೀಡಿದ್ದಾರಲ್ಲದೆ ಶೆಟ್ಟರ್, ಈಶ್ವರಪ್ಪ ಅವರನ್ನು ಕೈಬಿಡುವ ಬಗ್ಗೆ ಮಾಹಿತಿಯನ್ನು ತನ್ನ ಆಪ್ತನ ಜತೆ
ಹಂಚಿಕೊಂಡಿದ್ದಾರೆ. 

ಯಾರಿಗೂ ಹೇಳಬೇಡ ಎಂದು ತುಳು ಭಾಷೆಯಲ್ಲಿ ಹೇಳುತ್ತಾ, ನಂತರ ನಾವು ಹೇಳಿದಂತೆಯೇ ನಡೆಯಲಿದೆ. ಯಾರೇ ಬಂದರೂ ನಮಗೆ ಬೇಕಾದವರೇ ಆಗಿರಲಿದ್ದು ಮೂರು ಜನರ ಹೆಸರು ಹೈಕಮಾಂಡ್‌ ಗಮನದಲ್ಲಿದೆ ಎಂದು ನಳಿನ್ ಮಾಹಿಯನ್ನು ತನ್ನ ಆಪ್ತರು ಜತೆ ಹೇಳಿಕೊಂಡಿದ್ದಾರೆ.

ಆದರೆ ಈ ಆಡಿಯೋ ಕುರಿತು ಸ್ಪಷ್ಟನೆ ನೀಡಿದ ನಳಿನ್ ಅವರು, ಅದು ತನ್ನದಲ್ಲ, ಕಿಡಿಗೇಡಿಗಳ ಕೆಲಸ. ಸತ್ಯಾಸತ್ಯತೆ ಹೊರಬರಲು ತನಿಖೆ ನಡೆಸಲಿ. ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆಯುವುದಾಗಿ ಹೇಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು