5:14 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ತಪ್ಪು ಕಲ್ಪನೆಯಿಂದ ಭಾರತ ಬಂದ್ ಮಾಡಲಾಗಿದೆ, ಕೃಷಿ ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ

27/09/2021, 17:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷಿ ಕಾನೂನು ರೈತರಿಗೆ ಅನುಕೂಲ ಮಾಡಲೆಂದು 
ಕೇಂದ್ರ ಸರಕಾರ ರೂಪಿಸಿದೆ. ಭಾರತ ಬಂದ್ ಮಾಡಿರುವುದು ತಪ್ಪು ಕಲ್ಪನೆಯಿಂದ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷಣ ಸವದಿ ಅಭಿಪ್ರಾಯಪಟ್ಟರು.
ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕೃಷಿ ಕಾನೂನು ರೈತರಿಗೆ ಅನುಕೂಲ ಮಾಡಲೆಂದು ಸರ್ಕಾರ ರೂಪಿಸಿದೆ.
ದಲ್ಲಾಳಿಗಳಿಗೆ ಬಾರಿ ನಷ್ಟವಾಗುವುದರಿಂದ ತಪ್ಪು ಸಂದೇಶ ಸಾರುತ್ತಿದ್ದಾರೆ. 2008ರಿಂದ ಕರ್ನಾಟಕದಲ್ಲಿ ಈ ಕಾನೂನು ಜಾರಿ ಇದೆ. ಕೇಂದ್ರ ಸರ್ಕಾರ ಈಗಷ್ಟೇ ಕಾನೂನು ತಿದ್ದುಪಡಿ ಮಾಡಿದೆ ಎಂದು ಅವರು ನುಡಿದರು.
ಹರಿಯಾಣ, ಉತ್ತರ ಪ್ರದೇಶ, ಜಾರ್ಖಂಡ್ ರಾಜ್ಯದಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ. ರೈತರನ್ನು ಅವರ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ಅವರಿಗೆ ಭಾರಿ ನಷ್ಟ ಸಂಭವಿಸುವುದರಿಂದ ಕೃಷಿ ಕಾನೂನು ಬಗ್ಗೆ ತಪ್ಪು ಸಂದೇಶ ಸಾರುತ್ತಿದ್ದಾರೆ ಎಂದರು.
ರೈತರಿಗೆ ಅನ್ಯಾಯವಾಗುತ್ತದೆ ಎಂದಾದರೆ ಬಹಿರಂಗ ಸವಾಲಕ್ಕೆ ಬರಲಿ. ಯಾರಾದರೂ ಸಾಬೀತುಪಡಿಸಿದರೆ ಕಾನೂನನ್ನು ಹಿಂಪಡೆಯುತ್ತೇವೆ ಎಂದು ಸವದಿ ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು