9:38 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ತರಗತಿ, ಲೈಬ್ರೆರಿಗಳಿಗೆ ಹಿಜಾಬ್‌ ಧರಿಸಲು ಅವಕಾಶ ಇಲ್ಲ: ಮಂಗಳೂರು ವಿವಿ ಕಾಲೇಜು ಸಮಿತಿಯಿಂದ ನಿರ್ಧಾರ

28/05/2022, 18:30

ಮಂಗಳೂರು(reporterkarnataka.com) : ಮಂಗಳೂರು ವಿವಿ ಕಾಲೇಜಿನ ಕ್ಯಾಂಪಸ್‌ಗೆ ಹಿಜಾಬ್‌ ಧರಿಸಿ ಬರಬಹುದು. ಆದರೆ ತರಗತಿ, ಲೈಬ್ರೆರಿಗಳಿಗೆ ಹಿಜಾಬ್‌ ಧರಿಸಿ ಬರಲು ಅವಕಾಶ ಇಲ್ಲ ಎಂಬ ನಿರ್ಣಯಕ್ಕೆ ಕಾಲೇಜು ಅಭಿವೃದ್ಧಿ ಸಮಿತಿ ಬಂದಿದೆ.

ಶಾಸಕ ವೇದವ್ಯಾಸ ಕಾಮತ್‌, ಮಂಗಳೂರು ವಿ.ವಿ. ಕುಲಪತಿ ಪ್ರೊ. ಪಿ.ಎಸ್‌. ಯಡಪಡಿತ್ತಾಯ,ಕಾಲೇಜು ಪ್ರಾಂಶುಪಾಲೆ, ಸಿಂಡಿಕೇಟ್‌ ಸದಸ್ಯರು ಭಾಗವಹಿಸಿದ್ದರು.

ಹಿಜಾಬ್‌ಗ ತರಗತಿಯಲ್ಲಿ ನಿಷೇಧವಿದ್ದು, ಇದನ್ನು ಕಟ್ಟುನಿಟ್ಟು ಪಾಲಿಸಲಾಗುತ್ತದೆ. ನಿಯಮ ಪಾಲನೆಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಯಡಪಡಿತ್ತಾಯ ತಿಳಿಸಿದರು.

ಹೈಕೋರ್ಟ್‌ ಆದೇಶ ಬಳಿಕ ಪರೀಕ್ಷಾ ಪ್ರಕ್ರಿಯೆ ಇದ್ದ ಹಿನ್ನೆಲೆಯಲ್ಲಿ ಮಾರ್ಗಸೂಚಿ ಕಳುಹಿಸಲು ತಡವಾಯಿತು. ಆ ಬಳಿಕ ಸಿಂಡಿಕೇಟ್‌ ಸಭೆ ನಡೆಸಿ ಕ್ರಮ ಕೈಗೊಂಡಿದ್ದೇವೆ. ಇದರ ಪಾಲನೆ ವಿಚಾರದಲ್ಲಿ ಶಿಕ್ಷಕರ ವಿರುದ್ಧ ದೂರಿಗೆ ಸಾಕ್ಷ್ಯ ಇದ್ದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಮುಸ್ಲಿಂ ವಿದ್ಯಾರ್ಥಿನಿಯರು ಬಂದಾಗ ಅವರಿಗೆ ತಿಳಿವಳಿಕೆ ಹೇಳಿದ್ದೇವೆ. ಆದರೆ ಅವರು ಡಿಸಿ ಬಳಿ ಹೋಗುತ್ತೇನೆ ಎಂದಾಗ ಹೋಗಿ ಎಂದಿದ್ದೇನೆ. ವಿದ್ಯಾರ್ಥಿನಿಯರಿಗೆ ಕೌನ್ಸೆಲಿಂಗ್‌ ಮಾಡುತ್ತೇವೆ. ಇಲ್ಲವೇ ಬೇರೆ ಕಾಲೇಜಿಗೆ ಹೋಗುವುದಾದರೆ ವ್ಯವಸ್ಥೆ ಮಾಡುತ್ತೇವೆ ಎಂದರು.

ಶಾಸಕ ಕಾಮತ್‌ ಮಾತನಾಡಿ, ನಮಗೆ ಬಂದ ಆದೇಶದ ಪ್ರಕಾರ ಪದವಿ ಕಾಲೇಜಿಗೂ ಕೋರ್ಟ್‌ ಆದೇಶ ಅನ್ವಯ ಆಗುತ್ತದೆ. ಅದನ್ನು ಪಾಲಿಸಲೇಬೇಕು ಎಂದರು.

ಮಂಗಳೂರು ವಿವಿ ಕಾಲೇಜನ್ನು ದಿಲ್ಲಿಯ ಜೆಎನ್‌ಯು ಮಾಡಲು ನಾವು ಅವಕಾಶ ನೀಡುವುದಿಲ್ಲ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಹೇಳಿದ್ದಾರೆ.

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕಾಲೇಜಿನಲ್ಲಿ ರಾಜಕೀಯ ಮಾಡಿ ಎಸ್‌ಡಿಪಿಐ, ಮತ್ತು ಕಾಂಗ್ರೆಸ್‌ ಬೆಂಬಲಿತರು ವಿದ್ಯಾರ್ಥಿಗಳನ್ನು ಎತ್ತಿ ಕಟ್ಟಿದ್ದಾರೆ. ಮಂಗಳೂರಿನ ಮಣ್ಣಿನಲ್ಲಿ ಹುಟ್ಟಿದವರಿಗೆ ದೇಶ ಹಾಳು ಮಾಡಲು ಅವಕಾಶ ಇಲ್ಲ. ಸರಕಾರ ಮತ್ತು ಕೋರ್ಟ್‌ ನಿಯಮ ಪಾಲಿಸದೇ ಇದ್ದರೆ ಅಧ್ಯಾಪಕರೇ ಕೋರ್ಟ್‌ ಮೆಟ್ಟಲು ಹತ್ತಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ನಡುವೆ ವಿ.ವಿ. ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿನ್ಯಾಸ್‌ ಆಚಾರ್ಯ ರಾಜೀನಾಮೆ ನೀಡಿ ದ್ದಾರೆ. ಅವರು ಎಬಿವಿಪಿ ಬೆಂಬಲ ದಿಂದ ಆಯ್ಕೆಯಾಗಿದ್ದರು. ಹಿಜಾಬ್‌ಗ ನನ್ನದೂ ವಿರೋಧ ಇತ್ತು, ಆದರೆ ಪ್ರತಿಭಟನೆ ಮಾಡಿದರೆ ಕಾಲೇಜಿನಲ್ಲಿ ವಿನಾಕಾರಣ ಗಲಭೆ ಆಗುತ್ತದೆ ಎಂಬ ಕಾರಣಕ್ಕೆ ಪ್ರತಿಭಟನೆ ಬೇಡ ಎಂದಿದ್ದೆ, ನನ್ನ ಈ ನಿರ್ಧಾರ ತಪ್ಪು ಎಂದಾದರೆ ನಾನು ಅಧ್ಯಕ್ಷನಾಗಿದ್ದು ಪ್ರಯೋಜನ ಇಲ್ಲ ಹಾಗಾಗಿ ರಾಜೀನಾಮೆ ನೀಡಿ ದ್ದೇನೆ ಎಂದವರು ತಿಳಿಸಿದ್ದಾರೆ.

ಕಾಲೇಜಿನಲ್ಲಿ 44 ಮುಸ್ಲಿಂ ವಿದ್ಯಾರ್ಥಿನಿಯರಿದ್ದು, ಹಿಜಾಬ್‌ ವಿವಾದ ಒಂದು ತಂಡದಿಂದಷ್ಟೇ ಆಗಿದೆ. 15 ವಿದ್ಯಾರ್ಥಿಗಳಷ್ಟೇ ಹಿಜಾಬ್‌ ಕುರಿತು ಮಾತನಾಡುತ್ತಿದ್ದಾರೆ ಎಂದು ಪ್ರಾಂಶುಪಾಲೆ ಡಾ| ಅನಸೂಯ ರೈ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು