10:05 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ತರಕಾರಿ ಅಂಗಡಿಯಿಂದ 3000 ರೂ. ಮೌಲ್ಯದ 40 ಕೆಜಿ ಟಮೋಟೋ ಕಳ್ಳತನ: ದೂರು ದಾಖಲು

12/07/2023, 11:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರಕಾರಿ ಅಂಗಡಿಯಲ್ಲಿದ್ದ 3000 ಸಾವಿರ ಮೌಲ್ಯದ 40 ಕೆಜಿ ಟಮೋಟೋ ಇದ್ದ ಎರಡು ಟ್ರೇ ಕಳ್ಳತನವಾಗಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಘಟನೆ ಜಿಲ್ಲೆಯ ಆಲ್ದೂರಿನಲ್ಲಿ ನಡೆದಿದೆ.
ಆಲ್ದೂರು ಪಟ್ಟಣದ ನದೀಂ ಎಂಬುವರ ಅಂಗಡಿಯಲ್ಲಿ ಎರಡು ಟ್ರೇ ಟಮೋಟೋ ಕಳ್ಳತನವಾಗಿದೆ. ಸೋಮವಾರ ರಾತ್ರಿ ಎಂದಿನಂತೆ ತರಕಾರಿಯನ್ನ ಅಂಗಡಿಯಲ್ಲಿ ಇಟ್ಟು ಟಾರ್ಪಲ್ ಎಳೆದು ಹೋಗಿದ್ದರು. ಆದರೆ, ಮಂಗಳವಾರ ಬೆಳಗ್ಗೆ ಅಂಗಡಿಗೆ ಬಂದಾಗ ಟಮೋಟೋ ಇರಲಿಲ್ಲ. ಆಗ ಅಂಗಡಿಯ ಟಾರ್ಪಲ್ ಸರಿಸಿರುವುದು ಬೆಳಕಿಗೆ ಬಂದಿದೆ. ಆಲ್ದೂರು ಠಾಣೆಯ ಕಾಂಪೌಂಡ್‍ಗೆ ಹೊಂದಿಕೊಂಡಂತಿರುವ ತರಕಾರಿ ಅಂಗಡಿಯಲ್ಲಿ ಟಮೋಟೋ ಕಳ್ಳತನವಾಗಿದ್ದು ಸಾಲ ಮಾಡಿ ತರಕಾರಿ ವ್ಯಾಪಾರ ಮಾಡಿಕೊಂಡು ಬದುಕು ದೂಡುತ್ತಿದ್ದ ನದೀಂ ಅವರು ಅತಂತ್ರಕ್ಕೀಡಾಗಿದ್ದಾರೆ. ಆದರೆ, ನದೀಂ ಅವರ ತರಾಕಾರಿ ಅಂಗಡಿಗೆ ಬಾಗಿಲು ಇರಲಿಲ್ಲ. ಟಾರ್ಪಲ್ ಕಟ್ಟಿ ಹೋಗುತ್ತಿದ್ದರು. ಹೀಗೆ ಟಾರ್ಪಲ್ ಕಟ್ಟಿ ಹೋದಾಗ ಬರುವಷ್ಟರಲ್ಲಿ ರಾತ್ರೋರಾತ್ರಿ ಕಳ್ಳತನವಾಗಿದ್ದು ನದೀಂ ಟಮೋಟೋ ಕಳ್ಳತನವಾಗಿರುವ ಬಗ್ಗೆ ಆಲ್ದೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು