4:31 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ತರಕಾರಿ ಅಂಗಡಿಯಿಂದ 3000 ರೂ. ಮೌಲ್ಯದ 40 ಕೆಜಿ ಟಮೋಟೋ ಕಳ್ಳತನ: ದೂರು ದಾಖಲು

12/07/2023, 11:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರಕಾರಿ ಅಂಗಡಿಯಲ್ಲಿದ್ದ 3000 ಸಾವಿರ ಮೌಲ್ಯದ 40 ಕೆಜಿ ಟಮೋಟೋ ಇದ್ದ ಎರಡು ಟ್ರೇ ಕಳ್ಳತನವಾಗಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಘಟನೆ ಜಿಲ್ಲೆಯ ಆಲ್ದೂರಿನಲ್ಲಿ ನಡೆದಿದೆ.
ಆಲ್ದೂರು ಪಟ್ಟಣದ ನದೀಂ ಎಂಬುವರ ಅಂಗಡಿಯಲ್ಲಿ ಎರಡು ಟ್ರೇ ಟಮೋಟೋ ಕಳ್ಳತನವಾಗಿದೆ. ಸೋಮವಾರ ರಾತ್ರಿ ಎಂದಿನಂತೆ ತರಕಾರಿಯನ್ನ ಅಂಗಡಿಯಲ್ಲಿ ಇಟ್ಟು ಟಾರ್ಪಲ್ ಎಳೆದು ಹೋಗಿದ್ದರು. ಆದರೆ, ಮಂಗಳವಾರ ಬೆಳಗ್ಗೆ ಅಂಗಡಿಗೆ ಬಂದಾಗ ಟಮೋಟೋ ಇರಲಿಲ್ಲ. ಆಗ ಅಂಗಡಿಯ ಟಾರ್ಪಲ್ ಸರಿಸಿರುವುದು ಬೆಳಕಿಗೆ ಬಂದಿದೆ. ಆಲ್ದೂರು ಠಾಣೆಯ ಕಾಂಪೌಂಡ್‍ಗೆ ಹೊಂದಿಕೊಂಡಂತಿರುವ ತರಕಾರಿ ಅಂಗಡಿಯಲ್ಲಿ ಟಮೋಟೋ ಕಳ್ಳತನವಾಗಿದ್ದು ಸಾಲ ಮಾಡಿ ತರಕಾರಿ ವ್ಯಾಪಾರ ಮಾಡಿಕೊಂಡು ಬದುಕು ದೂಡುತ್ತಿದ್ದ ನದೀಂ ಅವರು ಅತಂತ್ರಕ್ಕೀಡಾಗಿದ್ದಾರೆ. ಆದರೆ, ನದೀಂ ಅವರ ತರಾಕಾರಿ ಅಂಗಡಿಗೆ ಬಾಗಿಲು ಇರಲಿಲ್ಲ. ಟಾರ್ಪಲ್ ಕಟ್ಟಿ ಹೋಗುತ್ತಿದ್ದರು. ಹೀಗೆ ಟಾರ್ಪಲ್ ಕಟ್ಟಿ ಹೋದಾಗ ಬರುವಷ್ಟರಲ್ಲಿ ರಾತ್ರೋರಾತ್ರಿ ಕಳ್ಳತನವಾಗಿದ್ದು ನದೀಂ ಟಮೋಟೋ ಕಳ್ಳತನವಾಗಿರುವ ಬಗ್ಗೆ ಆಲ್ದೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು