4:59 AM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ತಾರಕ್ಕೇರಿದ ಮಂಗಳೂರು ನೀರಿನ ಸಮಸ್ಯೆ; ಕಾಲ್ ಎತ್ತದ ಎಂಜಿನಿಯರ್ ಗಳು: ಮೇಯರ್ ಗೆ ಕಾರ್ಪೋರೇಟರ್ ಗಳ ದೂರು

12/02/2024, 19:44

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.ಕಾಂ

ಮಂಗಳೂರು ನಗರದಲ್ಲಿ ನೀರಿನ ಸಮಸ್ಯೆ ತಾರಕಕ್ಕೇರಿದ್ದು, ಇದರ ಬಿಸಿ ಸ್ವತಃ ಜನಪ್ರತಿನಿಧಿಗಳಾದ ಕಾರ್ಪೋರೇಟರ್ ಗಳಿಗೆ ತಟ್ಟಲಾರಂಭಿಸಿದೆ.

ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಇಂದು ನಡೆದ ಪಾಲಿಕೆಯ ವಿಶೇಷ ಸಭೆಯಲ್ಲಿ ಇದು ವ್ಯಕ್ತವಾಯಿತು. ನೀರಿನ ಸಮಸ್ಯೆ ಹೇಳಲು ಕಾಲ್ ಮಾಡಿದರೆ, ಪಾಲಿಕೆ ಎಂಜಿನಿಯರ್ ಗಳು ಕರೆ ಸ್ವೀಕರಿಸುತ್ತಿಲ್ಲ ಎಂದು ಕಾರ್ಪೋರೇಟರ್ ಗಳು ದೂರಿದ್ದಾರೆ. ಮಾಜಿ ಉಪ ಮೇಯರ್ ಒಬ್ಬರು ನೀರು ಬಾರದಿದ್ದರೆ, ತಾನು ಒಂದು ಗುಟುಕು ನೀರು ಕುಡಿಯೋದಿಲ್ಲ ಎಂದು ಶಪಥ ಮಾಡಿದ್ದಾರೆ. ನೀರಿನ ಬರದ ಬಗ್ಗೆ ಪಾಲಿಕೆ ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ ಆಡಳಿತ ಪಕ್ಷವನ್ನು ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾರ್ಪೋರೇಟರ್ಗಳ ಕರೆಗಳನ್ನು ಇಂಜಿನಿಯರ್ ಸ್ವೀಕರಿಸುತ್ತಿಲ್ಲ. ಕೆಲವರಲ್ಲಿ ಮಾತನಾಡಲು ಭಯ ಆಗುತ್ತೆ. ಹಾಗಾದರೆ ಪಾಲಿಕೆ ಸದಸ್ಯರಿಗೆ ಗೌರವ ಇಲ್ಲವೇ ಎಂದು ಕಾರ್ಪೋರೇಟರ್ ಗಾಯತ್ರಿ ರಾವ್ ಅವರು ಮೇಯರ್ ಅವರಲ್ಲಿ ದೂರಿದರು. ಮಾಜಿ ಉಪ ಮೇಯರ್, ಕಾರ್ಪೋರೇಟರ್ ಪೂರ್ಣಿಮಾ ಮಾತಾನಾಡಿ, ನನ್ನ ವಾರ್ಡ್ ಗೆ ನಾಳೆ ನೀರು ಬರದಿದ್ದಲ್ಲಿ ಒಂದು ಹನಿ ನೀರು ಕುಡಿಯೋದಿಲ್ಲ. ಪಾಲಿಕೆ ಮುಂದೆ ಕುಳಿತು ಧರಣಿ ಕೂರುವೆ ಎಂದು ಎಚ್ಚರಿಸಿದರು.
ಕಾರ್ಪೋರೇಟರ್ ನವೀನ್ ಡಿಸೋಜ ಮಾತನಾಡಿ, ಖಾಸಗಿ ಕಾಲೇಜಿವೊಂದರ ನೀರಿನ ಸಪ್ಲೈ ಅನ್ನು ಲೀಗಲ್ ಮಾಡಿದೆ. ಹಾಗೇನೇ ಇಲ್ ಲೀಗಲ್ ಇದ್ದಿದ್ದನ್ನು ಲೀಗಲ್ ಮಾಡಿ ಮಾಡಿ ಎಂದು ಒತ್ತಾಯಿಸಿದರು.
ನೀರಿನ ಸಮಸ್ಯೆ ಪರಿಹಾರವಾಗುವವರೆಗೆ ಬಿಲ್ಡಿಂಗ್ ಕಾಮಗಾರಿಗಳಿಗೆ ಅನುಮತಿ ನೀಡಬಾರದು ಎಂದು ಪ್ರತಿಪಕ್ಷದ ಸದಸ್ಯರು ಮೇಯರ್ ಗೆ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು