6:31 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ತಾರಕ್ಕೇರಿದ ಮಂಗಳೂರು ನೀರಿನ ಸಮಸ್ಯೆ; ಕಾಲ್ ಎತ್ತದ ಎಂಜಿನಿಯರ್ ಗಳು: ಮೇಯರ್ ಗೆ ಕಾರ್ಪೋರೇಟರ್ ಗಳ ದೂರು

12/02/2024, 19:44

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.ಕಾಂ

ಮಂಗಳೂರು ನಗರದಲ್ಲಿ ನೀರಿನ ಸಮಸ್ಯೆ ತಾರಕಕ್ಕೇರಿದ್ದು, ಇದರ ಬಿಸಿ ಸ್ವತಃ ಜನಪ್ರತಿನಿಧಿಗಳಾದ ಕಾರ್ಪೋರೇಟರ್ ಗಳಿಗೆ ತಟ್ಟಲಾರಂಭಿಸಿದೆ.

ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಇಂದು ನಡೆದ ಪಾಲಿಕೆಯ ವಿಶೇಷ ಸಭೆಯಲ್ಲಿ ಇದು ವ್ಯಕ್ತವಾಯಿತು. ನೀರಿನ ಸಮಸ್ಯೆ ಹೇಳಲು ಕಾಲ್ ಮಾಡಿದರೆ, ಪಾಲಿಕೆ ಎಂಜಿನಿಯರ್ ಗಳು ಕರೆ ಸ್ವೀಕರಿಸುತ್ತಿಲ್ಲ ಎಂದು ಕಾರ್ಪೋರೇಟರ್ ಗಳು ದೂರಿದ್ದಾರೆ. ಮಾಜಿ ಉಪ ಮೇಯರ್ ಒಬ್ಬರು ನೀರು ಬಾರದಿದ್ದರೆ, ತಾನು ಒಂದು ಗುಟುಕು ನೀರು ಕುಡಿಯೋದಿಲ್ಲ ಎಂದು ಶಪಥ ಮಾಡಿದ್ದಾರೆ. ನೀರಿನ ಬರದ ಬಗ್ಗೆ ಪಾಲಿಕೆ ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ ಆಡಳಿತ ಪಕ್ಷವನ್ನು ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾರ್ಪೋರೇಟರ್ಗಳ ಕರೆಗಳನ್ನು ಇಂಜಿನಿಯರ್ ಸ್ವೀಕರಿಸುತ್ತಿಲ್ಲ. ಕೆಲವರಲ್ಲಿ ಮಾತನಾಡಲು ಭಯ ಆಗುತ್ತೆ. ಹಾಗಾದರೆ ಪಾಲಿಕೆ ಸದಸ್ಯರಿಗೆ ಗೌರವ ಇಲ್ಲವೇ ಎಂದು ಕಾರ್ಪೋರೇಟರ್ ಗಾಯತ್ರಿ ರಾವ್ ಅವರು ಮೇಯರ್ ಅವರಲ್ಲಿ ದೂರಿದರು. ಮಾಜಿ ಉಪ ಮೇಯರ್, ಕಾರ್ಪೋರೇಟರ್ ಪೂರ್ಣಿಮಾ ಮಾತಾನಾಡಿ, ನನ್ನ ವಾರ್ಡ್ ಗೆ ನಾಳೆ ನೀರು ಬರದಿದ್ದಲ್ಲಿ ಒಂದು ಹನಿ ನೀರು ಕುಡಿಯೋದಿಲ್ಲ. ಪಾಲಿಕೆ ಮುಂದೆ ಕುಳಿತು ಧರಣಿ ಕೂರುವೆ ಎಂದು ಎಚ್ಚರಿಸಿದರು.
ಕಾರ್ಪೋರೇಟರ್ ನವೀನ್ ಡಿಸೋಜ ಮಾತನಾಡಿ, ಖಾಸಗಿ ಕಾಲೇಜಿವೊಂದರ ನೀರಿನ ಸಪ್ಲೈ ಅನ್ನು ಲೀಗಲ್ ಮಾಡಿದೆ. ಹಾಗೇನೇ ಇಲ್ ಲೀಗಲ್ ಇದ್ದಿದ್ದನ್ನು ಲೀಗಲ್ ಮಾಡಿ ಮಾಡಿ ಎಂದು ಒತ್ತಾಯಿಸಿದರು.
ನೀರಿನ ಸಮಸ್ಯೆ ಪರಿಹಾರವಾಗುವವರೆಗೆ ಬಿಲ್ಡಿಂಗ್ ಕಾಮಗಾರಿಗಳಿಗೆ ಅನುಮತಿ ನೀಡಬಾರದು ಎಂದು ಪ್ರತಿಪಕ್ಷದ ಸದಸ್ಯರು ಮೇಯರ್ ಗೆ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು