10:32 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ತರೀಕೆರೆ: ಖಾಸಗಿ ಬಸ್ ನುಗ್ಗಿ ಗಂಭೀರ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿನಿಯರ ಪೈಕಿ ಓರ್ವ ಬಾಲಕಿ ಸಾವು

07/09/2023, 17:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ವೊಂದು ಹರಿದು ಗಂಭೀರ ಗಾಯಗೊಂಡಿದ್ದ ಇಬ್ಬರು ಬಾಲಕಿಯ ಪೈಕಿ ಒಬ್ಬಳು ಬಾಲಕಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾಳೆ.


ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ಬಳಿ ನಡೆದ ಈ ದುರ್ಘಟನೆಯಲ್ಲಿ ತುಳಸಿ(15) ಹಾಗೂ ನಿವೇದಿತಾ(14) ಎಂಬ ಬಾಲಕಿಯರು ಗಂಭೀರ ಗಾಯಗೊಂಡಿದ್ದರು. ಇವರ ಪೈಕಿ ತುಳಸಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ತುಳಸಿ, ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು.
ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿಯಾದ
ಮಂಜು-ಲತಾ ದಂಪತಿಯ ಪುತ್ರಿ. ತುಳಸಿ ತಂದೆ-ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಬಸ್ ಚಾಲಕನ ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಬಸ್ ಮಕ್ಕಳ ಮೇಲೆ ನುಗ್ಗಿದೆ.
ಕೂದಲೆಳೆ ಅಂತರದಲ್ಲಿ ಐವರು ಮಕ್ಕಳು ಪಾರಾಗಿದ್ದಾರೆ.
ಗಂಭೀರ ಗಾಯಗೊಂಡ ಮಕ್ಕಳನ್ನು ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ಸಾಗಿಸಲಾಗಿತ್ತು. ಬಸ್
ಡಿಕ್ಕಿ ರಭಸಕ್ಕೆ ಮನೆಯ ಮುಂಭಾಗದ ಛಾವಣಿ ಸಂಪೂರ್ಣ ಜಖಂಗೊಂಡಿದೆ.


ಏಕಾಏಕಿ ರಸ್ತೆ ಬದಿಯ ಬಸ್ ನಿಲ್ದಾಣ ಹಾಗೂ ಮನೆಗಳತ್ತ ಬಸ್ ನುಗ್ಗಿದೆ. ನಿಯಂತ್ರಣ ತಪ್ಪಿದ ಬಸ್ ಕಂಡು ರಸ್ತೆ ಬದಿ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿ ಓಡಿ ಪ್ರಾಣ ಉಳಿಸಿಕೊಂಡಿದ್ದರು. ಅತೀ ವೇಗದ ಖಾಸಗಿ ಬಸ್ ಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ತರೀಕೆರೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು