4:56 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ತರೀಕೆರೆ: ಆತ್ಮರಕ್ಷಣೆಗೆಂದು ಅಧಿಕಾರಿಗಳು ಹಾರಿಸಿದ ಗುಂಡಿಗೆ ಚಿರತೆ ಸಾವು; ಪ್ರಾಣಿಪ್ರಿಯರ ಆಕ್ರೋಶ

30/11/2025, 15:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿರತೆ ಸೆರೆ ವೇಳೆ ಆತ್ಮರಕ್ಷಣೆಗೆಂದು ಅಧಿಕಾರಿಗಳು ಹಾರಿಸಿದ ಗುಂಡಿನಿಂದ ಚಿರತೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದ್ದು, ಇದು ಅಧಿಕಾರಿಗಳೇ ಮಾಡಿದ ಕೊಲೆ ಎಂದು ಪ್ರಾಣಿಪ್ರಿಯರು ಹಾಗೂ ಪರಿಸರವಾದಿಗಳು ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ನಿನ್ನೆ ತರೀಕೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಮನೆ ಬಳಿಯಿದ್ದ 11 ವರ್ಷದ ಯುವಕನ ಮೇಲೆ ಚಿರತೆ ದಾಳಿ ಮಾಡಿತ್ತು. ತೀವ್ರ ಗಾಯಗೊಂಡಿದ್ದ ಯುವಕನನ್ನು ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 11 ವರ್ಷದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದನು. ಆದರೆ, ಚಿರತೆಯ ಸೇವೆಗೆ ಅರಣ್ಯ ಇಲಾಖೆ ಮುಂದಾಗಿತ್ತು. ಇಂದು ಬೈರಾಪುರ ಗ್ರಾಮದಲ್ಲಿ ಚಿರತೆ ಇರುವುದನ್ನ ಖಚಿತ ಪಡಿಸಿಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೇರಿಗೆ ಮುಂದಾಗಿದ್ದರು. ಈ ವೇಳೆ ಗಿಡ-ಘಂಟೆಗಳ ಮಧ್ಯೆಯಿಂದ ಚಿರತೆ ಹಾರಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಆತ್ಮ ರಕ್ಷಣೆಗಾಗಿ ಚಿರತೆಯ ಮೇಲೆ ಗುಂಡು ಹಾರಿಸಿದ್ದಾರೆ. ಆದರೆ, ಚಿರತೆ ತಪ್ಪಿಸಿಕೊಂಡಿತ್ತು. ಅಧಿಕಾರಿಗಳು ಚಿರತೆಗಾಗಿ ಹುಡುಕಾಡಿದ ಮೇಲೆ ಚಿರತೆಯ ಮೃತದೇಹ ಪತ್ತೆಯಾಗಿತ್ತು. ಚಿರತೆಯ ದೇಹದ ಮೇಲೆ ಗುಂಡಿನ ಗುರುತು ಇದ್ದು, ಇದು ಅಧಿಕಾರಿಗಳೇ ಮಾಡಿದ ಕೊಲೆ ಎಂದು ಸ್ಥಳೀಯರು, ಪ್ರಾಣಿ ಪ್ರಿಯರು ಹಾಗೂ ಪರಿಸರವಾದಿಗಳು ಆರೋಪಿಸಿದ್ದಾರೆ. ಕಳೆದ ಒಂದು ವಾರದ ಹಿಂದಷ್ಟೇ ತರೀಕೆರೆ ತಾಲೂಕಿನ ಮುಂಡ್ರೆ ಗ್ರಾಮದ ಬಳಿ ಕೊಟ್ಟಿಗೆಯಲ್ಲಿದ್ದ 5 ವರ್ಷದ ಬಾಲಕಿಯನ್ನು ಚಿರತೆ ಹೊತ್ತೊಯ್ದಿತ್ತು. ನಿನ್ನೆ ಮತ್ತೊಬ್ಬ ಯುವಕನ ಮೇಲೆ ದಾಳಿ ಮಾಡಿದ್ದು ಚಿಕ್ಕಮಗಳೂರು ಜಿಲ್ಲೆಯ ಬಯಲುಸೀಮೆ ಭಾಗದ ರೈತರು ಚಿರತೆ ಹಾವಳಿಯಿಂದ ಹೈರಾಣಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು