2:36 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ತರೀಕೆರೆ: ಮನೆಯೊಳಗೆ ಪಟಾಕಿ ಸಿಡಿದು ಯುವಕ ಸಾವು: 4 ಮಂದಿಗೆ ಗಾಯ; ಓರ್ವ ಗಂಭೀರ

15/11/2023, 13:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯ ಮನೆಯೊಂದರಲ್ಲಿ ಪಟಾಕಿ ಸಿಡಿದು ಓರ್ವ ಯುವಕ ಸಾವನ್ನಪ್ಪಿದ್ದು, ಇತರ 4 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ.
ಮೃತ ಯುವಕನನ್ನು ಪ್ರದೀಪ್ (30) ಎಂದು ಗುರುತಿಸಲಾಗಿದೆ. ಚೇರ್ ಕೆಳಗೆ ಪಟಾಕಿ ಇಟ್ಟುಕೊಂಡು ಯುವಕ ಕೂತಿದ್ದ. ಪಟಾಕಿ ಸಿಡಿದ ರಭಸಕ್ಕೆ ಯುವಕ ನೆಲದಿಂದ 5 ಅಡಿ ಮೇಲಕ್ಕೆ ಹಾರಿ ಬಿದ್ದಿದ್ದ. ಕಲ್ಲು ಆಟಂಬಾಂಬ್ ಪಟಾಕಿಯನ್ನು ಚೇರ್ ಕೆಳಗೆ ಇಟ್ಟುಕೊಂಡು ಪ್ರದೀಪ್ ಕುಳಿತಿದ್ದ. ಪಟಾಕಿ ಕಿಡಿ ತಾಗಿ ಚೀಲದಲ್ಲಿದ್ದ ಅಡಿಕೆಗೋಟು ಪಟಾಕಿಗಳು ಬ್ಲಾಸ್ಟ್ ಆಗಿವೆ. ದೇಹದ ಸೂಕ್ಷ್ಮ ಜಾಗಕ್ಕೆ ಗಂಭೀರ ಗಾಯಗಳಾಗಿ ಪ್ರದೀಪ್ ಮೃತಪಟ್ಟಿದ್ದಾರೆ.
ಪ್ರದೀಪ್ ಜೊತೆಗಿದ್ದ ಮತ್ತೋರ್ವ ಯುವಕನಿಗೆ ಗಂಭೀರ ಗಾಯವಾಗಿದೆ.
ಮೂವರು ಮಕ್ಕಳಿಗೂ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲ್ಲು ಆಟಂಬಾಂಬ್ ಸಿಡಿದ ರಭಸಕ್ಕೆ ಮನೆಯ ಗ್ಲಾಸ್ ಗಳು ಪುಡಿ-ಪುಡಿಯಾಗಿವೆ. ತರೀಕೆರೆ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು