11:16 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ತರೀಕೆರೆ ಶಾಲೆಯಲ್ಲಿ 23 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಲಕ್ಷ್ಮಣ ಮೇಷ್ಟ್ರಿಗೆ ಭರ್ಜರಿ ಬೀಳ್ಕೊಡುಗೆ: ಊರು ತುಂಬಾ ಎತ್ತಿನ ಗಾಡಿಯಲ್ಲಿ ಮೆರವಣಿಗೆ

04/07/2023, 11:26

ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುಮಾರು 23 ವರ್ಷ ಒಂದೇ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಶಿಕ್ಷಕರಿಗೆ ಭರ್ಜರಿ ಬೀಳ್ಕೊಡುಗೆ ಮಾಡಿದ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಲಕ್ಷ್ಮಣ್ ಎನ್.ವಿ. ಅವರು ಕಳೆದ 23 ವರ್ಷಗಳಿಂದ ಒಂದೇ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ವಯೋ ನಿವೃತ್ತರಾಗಿದ್ದು, ಶಿಕ್ಷಕರಿಗೆ ಮಕ್ಕಳಿಂದ ಹೂಮಳೆಗರೆಯಲಾಯಿತು. ಶಿಕ್ಷಕ ನಡೆಯುವ ದಾರಿಯಲ್ಲಿ ಹೂ ಚೆಲ್ಲಿ ಮಕ್ಕಳು ಕೃತಜ್ಞತೆ ಪ್ರದರ್ಶಿಸಿದರು.
ಹಳ್ಳಿಗರು ಸೇರಿ ಮೇಷ್ಟ್ರನ್ನು ಎತ್ತಿಗಾಡಿಯಲ್ಲಿ ಮೆರವಣಿಗೆ ಮಾಡಿದರು. ಸುರಿಯೋ ಮಳೆಯಲ್ಲೇ ಊರಿನ ತುಂಬಾ ಮೆರವಣಿಗೆ ಮಾಡಲಾಯಿತು.


ಪುಟ್ಟ-ಪುಟ್ಟ ಮಕ್ಕಳೇ ವಾದ್ಯ ನುಡಿಸುತ್ತಾ, ಬ್ಯಾಂಡ್ ಬಡಿದುಕೊಂಡು ಶಿಕ್ಷಕರ ಮೆರವಣಿಗೆ ಮಾಡಿದರು.
ಇದಕ್ಕೆ ಮುನ್ನ ವೀರಗಾಸೆ ಮೂಲಕ ಶಿಕ್ಷಕರನ್ನು ಶಾಲೆಗೆ ಹೆಣ್ಣುಮಕ್ಕಳು ಕರೆದು ತಂದರು.
ಇಡೀ ಊರು ತುಂಬಾ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಶಿಕ್ಷಕ ವೃತ್ತಿಯ ಕೊನೇ ದಿನವಾದ ನಿನ್ನೆ ಶಿಕ್ಷಕ ದಂಪತಿಗೆ ಹಳ್ಳಿಗರು ಸನ್ಮಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು