10:52 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ತರೀಕೆರೆ ಶಾಲೆಯಲ್ಲಿ 23 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಲಕ್ಷ್ಮಣ ಮೇಷ್ಟ್ರಿಗೆ ಭರ್ಜರಿ ಬೀಳ್ಕೊಡುಗೆ: ಊರು ತುಂಬಾ ಎತ್ತಿನ ಗಾಡಿಯಲ್ಲಿ ಮೆರವಣಿಗೆ

04/07/2023, 11:26

ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುಮಾರು 23 ವರ್ಷ ಒಂದೇ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಶಿಕ್ಷಕರಿಗೆ ಭರ್ಜರಿ ಬೀಳ್ಕೊಡುಗೆ ಮಾಡಿದ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಲಕ್ಷ್ಮಣ್ ಎನ್.ವಿ. ಅವರು ಕಳೆದ 23 ವರ್ಷಗಳಿಂದ ಒಂದೇ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ವಯೋ ನಿವೃತ್ತರಾಗಿದ್ದು, ಶಿಕ್ಷಕರಿಗೆ ಮಕ್ಕಳಿಂದ ಹೂಮಳೆಗರೆಯಲಾಯಿತು. ಶಿಕ್ಷಕ ನಡೆಯುವ ದಾರಿಯಲ್ಲಿ ಹೂ ಚೆಲ್ಲಿ ಮಕ್ಕಳು ಕೃತಜ್ಞತೆ ಪ್ರದರ್ಶಿಸಿದರು.
ಹಳ್ಳಿಗರು ಸೇರಿ ಮೇಷ್ಟ್ರನ್ನು ಎತ್ತಿಗಾಡಿಯಲ್ಲಿ ಮೆರವಣಿಗೆ ಮಾಡಿದರು. ಸುರಿಯೋ ಮಳೆಯಲ್ಲೇ ಊರಿನ ತುಂಬಾ ಮೆರವಣಿಗೆ ಮಾಡಲಾಯಿತು.


ಪುಟ್ಟ-ಪುಟ್ಟ ಮಕ್ಕಳೇ ವಾದ್ಯ ನುಡಿಸುತ್ತಾ, ಬ್ಯಾಂಡ್ ಬಡಿದುಕೊಂಡು ಶಿಕ್ಷಕರ ಮೆರವಣಿಗೆ ಮಾಡಿದರು.
ಇದಕ್ಕೆ ಮುನ್ನ ವೀರಗಾಸೆ ಮೂಲಕ ಶಿಕ್ಷಕರನ್ನು ಶಾಲೆಗೆ ಹೆಣ್ಣುಮಕ್ಕಳು ಕರೆದು ತಂದರು.
ಇಡೀ ಊರು ತುಂಬಾ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಶಿಕ್ಷಕ ವೃತ್ತಿಯ ಕೊನೇ ದಿನವಾದ ನಿನ್ನೆ ಶಿಕ್ಷಕ ದಂಪತಿಗೆ ಹಳ್ಳಿಗರು ಸನ್ಮಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು