7:28 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ತರೀಕೆರೆ ಶಾಸಕರ ಅಭಿನಂದನಾ ಸಭೆಯಲ್ಲಿ ಗಲಭೆ: ಚಾಕು ಇರಿತ: ಯುವಕ ಸಾವು, ಇಬ್ಬರಿಗೆ ಗಾಯ

04/06/2023, 09:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@mail.com

ತರೀಕೆರೆಯ ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ನಡೆದ ಗಲಾಟೆ ಯುವಕನೋರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ.
ಚಾಕು ಇರಿತದಿಂದ ವರುಣ್ (28) ಎಂಬಾತ ಸಾವಿಗೀಡಾಗಿದ್ದಾನೆ.


ಮಂಜು ಹಾಗೂ ಸಂಜು ಎಂಬುವರು ಗಾಯಗೊಂಡಿದ್ದಾರೆ.
ತರೀಕೆರೆ ಶಾಸಕ ಶ್ರೀನಿವಾಸ್ ಗೆ ಅಭಿಮಾನಿಗಳು ಅಭಿನಂದನಾ ಸಮಾರಂಭ ಏರ್ಪಡಿಸಿದ್ದರು. ಆರ್ಕೆಸ್ಟ್ರಾದ ಹಾಡಿನ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಮಧ್ಯೆ ಗಲಾಟೆ ನಡೆಯಿತು. ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆಯಿತು.
ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ವರುಣ್ ಗೆ ಡ್ರ್ಯಾಗರ್ ಹಾಕಲಾಯಿತು.
ಮಂಜು ಹಾಗೂ ಸಂಜು ಕೈ ಹಾಗೂ ಕಾಲಿಗೆ ಚಾಕು ಇರಿತ ಉಂಟಾಗಿದೆ. ವರುಣ್ ಗೆ ಹೊಟ್ಟೆ ಹಾಗೂ ಪಕ್ಕಕೆಗೆ ಚಾಕುವಿನಿಂದ ಕಬಾಬ್ ಮೂರ್ತಿ ಇರಿದಿರುವುದಾಗಿ ಆರೋಪಿಸಲಾಗಿದೆ. ಗಾಯಾಳು ವರುಣ್ ಅವರನ್ನು ತಕ್ಷಣ ಶಿವಮೊಗ್ಗ ಆಸ್ಪತ್ರೆಗೆ ಕೊಂಡೊಯ್ದರೂ ಅವರು ಸಾವನ್ನಪ್ಪಿದ ರು ಎಂದು ತಿಳಿದು ಬಂದಿದೆ.
ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಎಸ್‌ ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು