2:44 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಟರ್ಪಾಲಿನೊಳಗಡೆ ಬ್ರಹ್ಮರಕೂಟ್ಲು ಟೋಲ್‌ಬೂತ್!!: ಸುಂಕ ವಸೂಲಿ ಸಿಬ್ಬಂದಿಗಳಿಗೆ ಸೌಕರ್ಯಗಳೇ ಇಲ್ಲ!

02/06/2024, 20:02

ಯಾದವ ಕುಲಾಲ್ ಅಗ್ರಬೈಲು ಬಂಟ್ವಾಳ

info.reporterkarnataka@gmail.com

ಟರ್ಪಾಲಿನಲ್ಲಿ ಮುಚ್ಚಿಕೊಂಡ ನಾಲ್ಕು ಬೂತ್‌ಗಳು,ಟರ್ಪಾಲಿನೊಳಗಡೆ ಕಬ್ಬಿಣದ ತುಕ್ಕು ಹಿಡಿದ ಮೆಶ್‌ನಿಂದ ನಿರ್ಮಾಣ ಮಾಡಿದ ಸುಂಕ ವಸೂಲಿಯ ಪುಟ್ಟ ಕೊಠಡಿ, ಅದರ ಸುತ್ತಲೂ ಕಬ್ಬಿಣದ ಶೀಟುಗಳ ರಾಶಿ, ಮತ್ತೊಂದು ಕಡೆ ತುಕ್ಕು ಹಿಡಿದಿರುವ ಕಬ್ಬಿಣದ ಪೈಪುಗಳ ರಾಶಿ ಹೀಗೆ ಕಬ್ಬಿಣದ ಪಂಜರದೊಳಗಿಂದ ದಿನದಲ್ಲಿ ಲಕ್ಷಾಂತರ ಸುಂಕ ವಸೂಲಿ ಮಾಡುತ್ತಿದ್ದರೂ ಕಾರ್ಮಿಕರಿಗೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ.


ಇದು ಮಂಗಳೂರು-ಬೆಂಗಳೂರು ಮಧ್ಯ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಬ್ರಹ್ಮರಕೂಟ್ಲುವಿನಲ್ಲಿ ಹಲವಾರು ವರ್ಷಗಳಿಂದ ಸುಂಕ ವಸೂಲಿ ಮಾಢುತ್ತಿರುವ ಟೋಲ್ ಕೇಂದ್ರದ ದುಸ್ಥಿತಿ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ದಿನಕ್ಕೆ ಲಕ್ಷಾಂತರ ಹಣವನ್ನು ರಾತ್ರಿ ಹಗಲೆನ್ನದೇ, ಮಳೆ ಬಿಸಿಲೆನ್ನದೇ ರಸ್ತೆಯಲ್ಲೇ ನಿಂತು ದಿನನಿತ್ಯ ಪ್ರವಾಸಿಗರಿಂದ ಬೈಗಳನ್ನೂ ತಿಂದರೂ ಸುಂಕ ವಸೂಲಿ ಮಾಡಿ ನೀಡುವ ಬೂತ್ ಮಾತ್ರ ಗ್ರಾಮೀಣ ಭಾಗದಲ್ಲಿರುವ ಗೂಡಂಗಡಿಗೆ ತರ್ಪಾಲ್ ಮುಚ್ಚಿದ ಸ್ಥಿತಿಯಲ್ಲಿದೆ.
*ಮೇಲ್ಚಾವಣಿ ರಿಪೇರಿ:*
ಕಳೆದ ಕೆಲವು ದಿನಗಳಿಂದ ಟೋಲ್ ಪ್ಲಾಜಾದ ಮೇಲ್ಚಾವಣಿ ಶೀಟು ಇಲ್ಲದಿರುವ ಕಡೆ ಹೊಸ ಶೀಟುಗಳನ್ನು ಹಾಕಿದ್ದು, ಅದರಲ್ಲಿ ಉಳಿದ ಹಳೆಯ ತುಕ್ಕು ಹಿಡಿದಿರುವ ಕಬ್ಬಿಣದ ಕಂಬಗಳು, ಕಬ್ಬಿಣದ ಶೀಟುಗಳು ಸುಂಕ ವಸೂಲಿ ಕೇಂದ್ರದ ಹತ್ತಿರವೇ ರಾಶಿಯಾಗಿ ಬಿದ್ದಿದೆ. ಇದರಿಂದ ಇಲ್ಲಿರುವ ಕಾರ್ಮಿಕರಿಗೆ ಬರುವ ವಾಹನಗಳ ಸುಂಕ ವಸೂಲಿ ಮಾಡಲು ತೊಂದರೆಯಾಗುತ್ತಿದೆ.
*ರಾತ್ರಿ ಮರಳು ಲಾರಿ ವಿರುದ್ಧ ದಿಕ್ಕಿನಲ್ಲಿ ಸಂಚಾರ:* ಸರ್ವೀಸ್ ರಸ್ತೆಯಲ್ಲಿ ಘನವಾಹನಗಳಿಗೆ ತಡೆಬೇಲಿ ನಿರ್ಮಿಸಿರುವುದರಿಂದ ಬಿ.ಸಿ.ರೋಡಿನಿಂದ ಮರಳು ಕೊಂಡೊಯ್ಯಲು ಬರುತ್ತಿರುವ ಹೆಚ್ಚಿನ ವಾಹನಗಳು ರಾತ್ರಿ ಹೊತ್ತಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ವಿರುದ್ಧ ದಿಕ್ಕಿನಲ್ಲೇ ನಿರಂತರ ಸಂಚಾರ ಮಾಡುತ್ತಿವೆ. ಈ ಸಮಯದಲ್ಲಿ ಸುಂಕ ವಸೂಲಿ ಮಾಡುವ ಕಾರ್ಮಿಕರು ಮಾತ್ರ ಇದ್ದು, ಪೊಲೀಸ್ ಇಲಾಖೆ ಯಾವುದೇ ಸಿಬ್ಬಂದಿಯನ್ನು ನೇಮಿಸದೇ ಇರುವುದರಿಂದ ವಸೂಲಿ ಮಾಡುವ ಸಂದರ್ಭದಲ್ಲಿ ಪ್ರಾಣ ಭಯವೂ ಕಾಡುತ್ತಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಈ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಂಡು ವ್ಯವಸ್ಥಿತ ರೀತಿಯಲ್ಲಿ ಈ ಟೋಲ್ ಬೂತ್‌ನ್ನು ನಿರ್ಮಾಣ ಮಾಡಬೇಕಾಗಿದೆ. ಇದರಿಂದ ಟೋಲ್ ವಸೂಲಿ ಕಾರ್ಮಿಕಗರಿಗೂ ಅನುಕೂಲವಾಗಲಿದೆ ಜೊತೆಗೆ ವಾಹನ ಸವಾರರಿಗೂ ಕೂಡ.
ಎಲ್ಲ ಕಡೆ ಟೋಲ್‌ಗೇಟ್ ವ್ಯವಸ್ಥೆ ಇರುವಂತೆ ಬ್ರಹ್ಮರಕೂಟ್ಲುವಿನಲ್ಲಿ ಇಲ್ಲ. ಸುಂಕ ನೀಡುವವರಿಗೇ ಯಾವುದೇ ವ್ಯವಸ್ಥೆ ಇಲ್ಲ. ಟೋಲ್ ಬೂತ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೂ ಸರಿಯಾದ ಭದ್ರತೆ ಇಲ್ಲ. ಅಷ್ಟೇ ಅಲ್ಲದೇ ಟೋಲ್‌ಗೇಟ್ ಬಳಿ ಬರುವಾಗ ತುಕ್ಕು ಹಿಡಿದಿರುವ ಕಬ್ಬಿಣದ ಕೋಟೆಯೊಳಗೆ ಹೊಕ್ಕಿದಂತಾಗುತ್ತದೆ. ಪೈಂಟ್ ಬಳಿಯದೆ ಎಷ್ಟು ವರ್ಷಗಳಾಗಿರಬಹುದು ಎಂದು ಮಾಧವ ಬಿ.ಸಿ.ರೋಡು ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು