10:36 AM Wednesday11 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ತಾತ್ಸಾರದ ನುಡಿ: ಸಂಬಂಧಿಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ; 18 ಸಾವಿರ ರೂ. ದಂಡ

10/02/2023, 00:32

ರಾಹುಲ್ ಅಥಣಿ ಬೆಳಗಾವಿ

info.reporterkarnataka agnail.com

ಗ್ರಾಮಸ್ಥರ ಹಾಗೂ ಕುಟುಂಬಸ್ಥರ ತಾತ್ಸಾರದ ಮಾತುಗಳನ್ನು ಕೇಳಿ ಸಹೋದರನ್ನು ಕೊಲೆ ಮಾಡಿರುವ ಆರೋಪಿಗೆ ಚಿಕ್ಕೋಡಿ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. ಸಂಬಂಧದಲ್ಲಿ ಸಹೋದರಾಗುವ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿಗೆ ಚಿಕ್ಕೋಡಿ 7ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 18 ಸಾವಿರ ರೂ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ.

ಅಥಣಿ ತಾಲೂಕಿನ ತೇವರಟ್ಟಿ ಗ್ರಾಮದ ಆರೋಪಿ ಭೀಮಣ್ಣಾ ಭರಮು ಚಿಪ್ಪರಗಿ ಇತನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಕಳೆದ 2007 ರಂದು ಅಣ್ಣಪ್ಪ ನೇಮಣ್ಣಾ ಚಿಪ್ಪರಗಿ ಕೊಲೆಯಾದ ವ್ಯಕ್ತಿ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬೆಂಗಳೂರಿನ ಗ್ಲಾಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಅಣ್ಣಪ್ಪ ಚಿಪ್ಪರಗಿ ಕಾರ್ಖಾನೆ ಬಂದ್ ಆದ ಬಳಿಕ ಗುಜರಾತಕ್ಕೆ ಹೋಗಿ ಕೆಲಸ ನಿರ್ವಹಿಸುತ್ತಿದ್ದ. ಒಮ್ಮೆ ಊರಿಗೆ ಬಂದಾಗ ಅರೋಪಿ ಭೀಮಣ್ಣಾ ನನಗೂ ಕೆಲಸ ಕೊಡಿಸು ಅಂತ ಕೇಳಿಕೊಂಡಾಗ ಅಣ್ಣಪ್ಪ ಆರೋಪಿಯನ್ನು ಗುಜರಾತಿಗೆ ಕರೆದುಕೊಂಡು ಹೋಗಿ ಕೆಲಸ ಕೊಡಿಸಿದ್ದ. ಆದರೆ ಬಹಳ ದಿನ ಕೆಲಸ ಮಾಡದೇ ಮರಳಿ ಊರಿಗೆ ಬಂದ ಆರೋಪಿಗೆ ಮನೆಯವರು ತಾತ್ಸಾರ ಮನೋಭಾವ ತೋರುತ್ತಿದ್ದರು. ನೋಡು ಅಣ್ಣಪ್ಪ ಕಾರ್ಖಾನೆಯಲ್ಲಿ ಕೆಲಸ ಮಾಡಿ ಮನೆ ಕಟ್ಟಿಸಿಕೊಂಡ ನೀನೆನು ಮಾಡುತ್ತೀಯಾ ಊರಲ್ಲಿ ಒಕ್ಕಲುತನ ಮಾಡುತ್ತೀಯಾ ಅಂತ ಹೇಳಿದಾಗ ಕೋಪಗೊಂಡ ಆರೋಪಿಯು ಅಣ್ಣಪ್ಪನನ್ನು ಕೊಲೆ ಮಾಡಿರುವ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ 7 ನೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್.ಎಲ್.ಚೌವ್ಹಾಣ ಅವರು ಆರೋಪಿತನಿಗೆ ಜೀವಾವಧಿ ಶಿಕ್ಣೆ ಹಾಗೂ 18 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸರ್ಕಾರದ ಪರವಾಗಿ ಸರಕಾರಿ ಅಭಿಯೋಜಕ ವೈ.ಬಿ.ತುಂಗಳ ವಾದ ಮಂಡಿಸಿದರು.ಪ್ರಕರಣದ ತನಿಖೆ ಮಾಡಿ ಅಥಣಿ ಸಿಪಿಐ ಶೇಖರೆಪ್ಪ ಎಚ್.ಅವರು ಆರೋಪಿ ಮೇಲೆ ದೋಷಾರೋಪಣೆ ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು