3:21 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ತಾತ್ಸಾರದ ನುಡಿ: ಸಂಬಂಧಿಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ; 18 ಸಾವಿರ ರೂ. ದಂಡ

10/02/2023, 00:32

ರಾಹುಲ್ ಅಥಣಿ ಬೆಳಗಾವಿ

info.reporterkarnataka agnail.com

ಗ್ರಾಮಸ್ಥರ ಹಾಗೂ ಕುಟುಂಬಸ್ಥರ ತಾತ್ಸಾರದ ಮಾತುಗಳನ್ನು ಕೇಳಿ ಸಹೋದರನ್ನು ಕೊಲೆ ಮಾಡಿರುವ ಆರೋಪಿಗೆ ಚಿಕ್ಕೋಡಿ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. ಸಂಬಂಧದಲ್ಲಿ ಸಹೋದರಾಗುವ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿಗೆ ಚಿಕ್ಕೋಡಿ 7ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 18 ಸಾವಿರ ರೂ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ.

ಅಥಣಿ ತಾಲೂಕಿನ ತೇವರಟ್ಟಿ ಗ್ರಾಮದ ಆರೋಪಿ ಭೀಮಣ್ಣಾ ಭರಮು ಚಿಪ್ಪರಗಿ ಇತನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಕಳೆದ 2007 ರಂದು ಅಣ್ಣಪ್ಪ ನೇಮಣ್ಣಾ ಚಿಪ್ಪರಗಿ ಕೊಲೆಯಾದ ವ್ಯಕ್ತಿ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬೆಂಗಳೂರಿನ ಗ್ಲಾಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಅಣ್ಣಪ್ಪ ಚಿಪ್ಪರಗಿ ಕಾರ್ಖಾನೆ ಬಂದ್ ಆದ ಬಳಿಕ ಗುಜರಾತಕ್ಕೆ ಹೋಗಿ ಕೆಲಸ ನಿರ್ವಹಿಸುತ್ತಿದ್ದ. ಒಮ್ಮೆ ಊರಿಗೆ ಬಂದಾಗ ಅರೋಪಿ ಭೀಮಣ್ಣಾ ನನಗೂ ಕೆಲಸ ಕೊಡಿಸು ಅಂತ ಕೇಳಿಕೊಂಡಾಗ ಅಣ್ಣಪ್ಪ ಆರೋಪಿಯನ್ನು ಗುಜರಾತಿಗೆ ಕರೆದುಕೊಂಡು ಹೋಗಿ ಕೆಲಸ ಕೊಡಿಸಿದ್ದ. ಆದರೆ ಬಹಳ ದಿನ ಕೆಲಸ ಮಾಡದೇ ಮರಳಿ ಊರಿಗೆ ಬಂದ ಆರೋಪಿಗೆ ಮನೆಯವರು ತಾತ್ಸಾರ ಮನೋಭಾವ ತೋರುತ್ತಿದ್ದರು. ನೋಡು ಅಣ್ಣಪ್ಪ ಕಾರ್ಖಾನೆಯಲ್ಲಿ ಕೆಲಸ ಮಾಡಿ ಮನೆ ಕಟ್ಟಿಸಿಕೊಂಡ ನೀನೆನು ಮಾಡುತ್ತೀಯಾ ಊರಲ್ಲಿ ಒಕ್ಕಲುತನ ಮಾಡುತ್ತೀಯಾ ಅಂತ ಹೇಳಿದಾಗ ಕೋಪಗೊಂಡ ಆರೋಪಿಯು ಅಣ್ಣಪ್ಪನನ್ನು ಕೊಲೆ ಮಾಡಿರುವ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ 7 ನೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್.ಎಲ್.ಚೌವ್ಹಾಣ ಅವರು ಆರೋಪಿತನಿಗೆ ಜೀವಾವಧಿ ಶಿಕ್ಣೆ ಹಾಗೂ 18 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸರ್ಕಾರದ ಪರವಾಗಿ ಸರಕಾರಿ ಅಭಿಯೋಜಕ ವೈ.ಬಿ.ತುಂಗಳ ವಾದ ಮಂಡಿಸಿದರು.ಪ್ರಕರಣದ ತನಿಖೆ ಮಾಡಿ ಅಥಣಿ ಸಿಪಿಐ ಶೇಖರೆಪ್ಪ ಎಚ್.ಅವರು ಆರೋಪಿ ಮೇಲೆ ದೋಷಾರೋಪಣೆ ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು