2:11 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ತಾತ್ಸಾರದ ನುಡಿ: ಸಂಬಂಧಿಕನ ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ; 18 ಸಾವಿರ ರೂ. ದಂಡ

10/02/2023, 00:32

ರಾಹುಲ್ ಅಥಣಿ ಬೆಳಗಾವಿ

info.reporterkarnataka agnail.com

ಗ್ರಾಮಸ್ಥರ ಹಾಗೂ ಕುಟುಂಬಸ್ಥರ ತಾತ್ಸಾರದ ಮಾತುಗಳನ್ನು ಕೇಳಿ ಸಹೋದರನ್ನು ಕೊಲೆ ಮಾಡಿರುವ ಆರೋಪಿಗೆ ಚಿಕ್ಕೋಡಿ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. ಸಂಬಂಧದಲ್ಲಿ ಸಹೋದರಾಗುವ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿಗೆ ಚಿಕ್ಕೋಡಿ 7ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 18 ಸಾವಿರ ರೂ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ.

ಅಥಣಿ ತಾಲೂಕಿನ ತೇವರಟ್ಟಿ ಗ್ರಾಮದ ಆರೋಪಿ ಭೀಮಣ್ಣಾ ಭರಮು ಚಿಪ್ಪರಗಿ ಇತನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಕಳೆದ 2007 ರಂದು ಅಣ್ಣಪ್ಪ ನೇಮಣ್ಣಾ ಚಿಪ್ಪರಗಿ ಕೊಲೆಯಾದ ವ್ಯಕ್ತಿ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬೆಂಗಳೂರಿನ ಗ್ಲಾಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಅಣ್ಣಪ್ಪ ಚಿಪ್ಪರಗಿ ಕಾರ್ಖಾನೆ ಬಂದ್ ಆದ ಬಳಿಕ ಗುಜರಾತಕ್ಕೆ ಹೋಗಿ ಕೆಲಸ ನಿರ್ವಹಿಸುತ್ತಿದ್ದ. ಒಮ್ಮೆ ಊರಿಗೆ ಬಂದಾಗ ಅರೋಪಿ ಭೀಮಣ್ಣಾ ನನಗೂ ಕೆಲಸ ಕೊಡಿಸು ಅಂತ ಕೇಳಿಕೊಂಡಾಗ ಅಣ್ಣಪ್ಪ ಆರೋಪಿಯನ್ನು ಗುಜರಾತಿಗೆ ಕರೆದುಕೊಂಡು ಹೋಗಿ ಕೆಲಸ ಕೊಡಿಸಿದ್ದ. ಆದರೆ ಬಹಳ ದಿನ ಕೆಲಸ ಮಾಡದೇ ಮರಳಿ ಊರಿಗೆ ಬಂದ ಆರೋಪಿಗೆ ಮನೆಯವರು ತಾತ್ಸಾರ ಮನೋಭಾವ ತೋರುತ್ತಿದ್ದರು. ನೋಡು ಅಣ್ಣಪ್ಪ ಕಾರ್ಖಾನೆಯಲ್ಲಿ ಕೆಲಸ ಮಾಡಿ ಮನೆ ಕಟ್ಟಿಸಿಕೊಂಡ ನೀನೆನು ಮಾಡುತ್ತೀಯಾ ಊರಲ್ಲಿ ಒಕ್ಕಲುತನ ಮಾಡುತ್ತೀಯಾ ಅಂತ ಹೇಳಿದಾಗ ಕೋಪಗೊಂಡ ಆರೋಪಿಯು ಅಣ್ಣಪ್ಪನನ್ನು ಕೊಲೆ ಮಾಡಿರುವ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ 7 ನೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್.ಎಲ್.ಚೌವ್ಹಾಣ ಅವರು ಆರೋಪಿತನಿಗೆ ಜೀವಾವಧಿ ಶಿಕ್ಣೆ ಹಾಗೂ 18 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸರ್ಕಾರದ ಪರವಾಗಿ ಸರಕಾರಿ ಅಭಿಯೋಜಕ ವೈ.ಬಿ.ತುಂಗಳ ವಾದ ಮಂಡಿಸಿದರು.ಪ್ರಕರಣದ ತನಿಖೆ ಮಾಡಿ ಅಥಣಿ ಸಿಪಿಐ ಶೇಖರೆಪ್ಪ ಎಚ್.ಅವರು ಆರೋಪಿ ಮೇಲೆ ದೋಷಾರೋಪಣೆ ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು