1:24 AM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಟ್ಯಾಕ್ಸಿ ಚಾಲಕನ ಕೊಲೆ ಯತ್ನ ಪ್ರಕರಣ; ಬಾಡಿಗೆ ಪ್ರಯಾಣಕ್ಕೆ ಮುನ್ನ ಎಚ್ಚರ ಅಗತ್ಯ: ದ.ಕ. ಜಿಲ್ಲಾ ಟ್ಯಾಕ್ಸಿಮೆನ್ಸ್‌ ಮತ್ತು ಮ್ಯಾಕ್ಸಿಕ್ಯಾಬ್‌ ಅಸೋಸಿಯೇಶನ್‌ 

24/08/2022, 00:36

ಮಂಗಳೂರು(reporterkarnataka.com): ಬಾಡಿಗೆಗೆ ಟ್ಯಾಕ್ಸಿ ನಿಗದಿ ಮಾಡಿ ಅರ್ಧ ದಾರಿಯಲ್ಲಿ ಚಾಲಕರನ್ನು ಲೂಟಿ ಮಾಡುವ ಹಾಗೂ ಹಲ್ಲೆ ಮಾಡುವ ದುಷ್ಕೃತ್ಯಗಳು ಕರಾವಳಿಯಲ್ಲಿ ನಡೆಯುತ್ತಿದ್ದು, ಈ ಬಗ್ಗೆ ಚಾಲಕರು ಎಚ್ಚರಿಕೆ ವಹಿಸಬೇಕು ಎಂದು ದ.ಕ. ಜಿಲ್ಲಾ ಟ್ಯಾಕ್ಸಿಮೆನ್ಸ್‌ ಮತ್ತು ಮ್ಯಾಕ್ಸಿಕ್ಯಾಬ್‌ ಅಸೋಸಿಯೇಶನ್‌ ಸಲಹೆ ನೀಡಿದೆ.

ಸಂಘದ ಅಧ್ಯಕ್ಷ ದಿನೇಶ್‌ ಕುಂಪಲ ಎಂ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆ. 20ರಂದು ಲೇಡಿಗೋಶನ್‌ ಬಳಿಯ ಪಾರ್ಕ್‌ನಿಂದ ಅಬ್ದುಲ್‌ ರಹಿಮಾನ್‌ ಎಂಬ ಟ್ಯಾಕ್ಸಿ ಚಾಲಕರ ಬಳಿ ಬಂದ ಮೂವರು ಅಪರಿಚಿತರು ಸುಬ್ರಹ್ಮಣ್ಯಕ್ಕೆ ಬಾಡಿಗೆ ಗೊತ್ತುಪಡಿಸಿದ್ದರು. ಆ ಬಳಿಕ ಅರ್ಧ ದಾರಿಯಲ್ಲಿ ಮುರುಡೇಶ್ವರಕ್ಕೆ ತೆರಳಲು ಸೂಚಿಸಿದ್ದರು. ಅಲ್ಲಿಗೆ ತೆರಳಿದ ವೇಳೆ ಹೊನ್ನಾವರ ಕಡೆಗೆ ಹೋಗುವಂತೆ ಒತ್ತಾಯಿಸಿದ್ದಾರೆ. ಚಾಲಕನಿಗೆ ಈ ಸಂದರ್ಭ ಅನುಮಾನ ಬಂದು ವಾಹನ ನಿಲ್ಲಿಸಲು ಪ್ರಯತ್ನಿಸುವ ಸಂದರ್ಭ ಟ್ಯಾಕ್ಸಿಯಲ್ಲಿದ್ದ ಪ್ರಯಾಣಿಕರು ಹಠಾತ್ತಾಗಿ ಚೂರಿಯಿಂದ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭ ಮಂಕಿ ಠಾಣೆಯ ಬಳಿ ಗಸ್ತು ನಿರತರಾಗಿದ್ದ ಪೊಲೀಸರು ಬಂದು ಚಾಲಕನನ್ನು ರಕ್ಷಿಸಿದ್ದಾರೆ. ಮಾತ್ರವಲ್ಲದೆ ಟ್ಯಾಕ್ಸಿಯಿಂದ ತಪ್ಪಿಸಿ ಓಡಿಹೋಗಲು ಯತ್ನಿಸಿದ್ದ ಮೂವರು ದುಷ್ಕರ್ಮಿಗಳನ್ನು ಸ್ಥಳೀಯರು ಹಾಗೂ ಪೊಲೀಸರು ಬೆನ್ನಟ್ಟಿ ಹಿಡಿದು ಪ್ರಕರಣ ದಾಖಲಿಸಿದ್ದಾರೆ ಎಂದರು.

ಪ್ರಯಾಣಿಕರ ಸೋಗಿನಲ್ಲಿದ್ದ ದುಷ್ಕರ್ಮಿಗಳು ತಮ್ಮ ಜತೆ ಖಾರದ ಪುಡಿ, ಹಗ್ಗ, ಚಾಕುವನ್ನು ಹೊಂದಿದ್ದರು. ಕಾರು ಚಲಾಯಿಸುತ್ತಿರುವಾಗಲೇ ಚಾಲಕ ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದುದ್ದನ್ನು ದಾರಿಯಲ್ಲಿ ಗಸ್ತಿನಲ್ಲಿದ್ದ ಪೊಲೀಸರು ಕಂಡು ಸಹಕರಿಸಿದ ಕಾರಣ ಚಾಲಕ ತನ್ನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗಿದೆ. ಚಾಲಕನ ಕೈ ಹಾಗೂ ಕುತ್ತಿಗೆಗೆ ಚೂರಿ ಇರಿತದ ಗಾಯವಾಗಿದೆ. ಬಾಡಿಗೆ ಗೊತ್ತುಪಡಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ಯುವ ಈ ತಂಡ ಅಲ್ಲಿ ಚಾಲಕನಿಂದ ವಾಹನವನ್ನು ಬಲವಂತವಾಗಿ ಪಡೆದು ಪರಾರಿಯಾಗುವ ತಂಡ ಇದಾಗಿದೆ. ಇಂತಹ ಹಲವು ಘಟನೆಗಳು ಕೆಲವು ಕಡೆಯಲ್ಲಿ ನಡೆದಿವೆ ಎಂದವರು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು