3:36 AM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಟಯರಿಗೆ ನಟ್ ಹಾಕದೆ ಬಸ್ ಓಡಾಟ: ಇದು ಚಿಕ್ಕಮಗಳೂರು ಡಿಪೋ ಕೆಎಸ್ಸಾರ್ಟಿಸಿ ಸ್ಪೆಷಾಲಿಟಿ; ಸಾರಿಗೆ ಸಚಿವರೇ ಹೆಚ್ಚು ಕಡಿಮೆ ಆದ್ರೆ ಯಾರು ಜವಾಬ್ದಾರಿ?

17/10/2023, 21:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಟಯರಿಗೆ ನಟ್ ಬಿಗಿಯದೇ ಬಸ್ ಓಡಿಸುವುದನ್ನು ನೀವು ಎಲ್ಲದರು ನೋಡಿದ್ದೀರಾ? ನೋಡದಿದ್ದರೆ ಪರವಾಗಿಲ್ಲ, ಈಗ ನೋಡಿ ಬಿಡಿ. ಕೆಎಸ್ಸಾರ್ಟಿಸಿ ಬಸ್ಸನ್ನು ಟಯರಿಗೆ ನೆಟ್ ಹಾಕದೆ ಓಡಿಸಿದ ಘಟನೆ ನಡೆದಿದೆ.
ಇದು ನಡೆದದ್ದು ಚಿಕ್ಕಮಗಳೂರು-ಆಲ್ದೂರು ಮಾರ್ಗದ ಲೋಕಲ್ ಬಸ್ಸಿನಲ್ಲಿ.ಸರ್ಕಾರಿ ಬಸ್ಸಿನ ಚಕ್ರಕ್ಕೆ ನಟ್ ಗಳೇ ಇಲ್ಲ. ಇದೊಂದು ಸಾರಿಗೆ ಇಲಾಖೆಯ ಬಹು ದೊಡ್ಡ ಬೇಜವಾಬ್ದಾರಿಯಾಗಿದೆ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.
ಬಸ್ಸಿನ ಟಯರಿಗೆ 8 ನಟ್ ಇರಬೇಕಾದ ಜಾಗದಲ್ಲಿ 3 ನಟ್ ಮಾತ್ರ ಹಾಕಿ ಬಸ್ ಓಡಿಸಲಾಗಿದೆ.
ಅದೇ ಸ್ಥಿತಿಯಲ್ಲಿ ಬಸ್ಸನ್ನ ಚಾಲಕ ಓಡಿಸಿದ್ದಾರೆ. ನಿತ್ಯ ಶಾಲಾ-ಕಾಲೇಜು ಮಕ್ಕಳು, ವಿವಿಧ ಸಂಸ್ಥೆ ಗಳಲ್ಲಿ ಕೆಲಸ ಮಾಡುವವರು ಇದರಲ್ಲಿ ಪ್ರಯಾಣಿಸುತ್ತಾರೆ. ಮೊದಲೇ ಮಲೆನಾಡು, ಎತ್ತರದ ಬೆಟ್ಟ, ಆಳವಾದ ಕಂದಕದ ನಡುವೆ ಹಾವಿನಂತೆ ಸರಿದಾಡುವ ರಸ್ತೆಗಳು. ಏನಾದ್ರು ಹೆಚ್ಚು-ಕಡಿಮೆಯಾದರೆ ಜವಾಬ್ದಾರಿ ಯಾರು…?
ಸಾರಿಗೆ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಡಿಪೋಗೆ ಸೇರಿದ ಸರ್ಕಾರಿ ಬಸ್ ಇದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು