9:23 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಟಯರಿಗೆ ನಟ್ ಹಾಕದೆ ಬಸ್ ಓಡಾಟ: ಇದು ಚಿಕ್ಕಮಗಳೂರು ಡಿಪೋ ಕೆಎಸ್ಸಾರ್ಟಿಸಿ ಸ್ಪೆಷಾಲಿಟಿ; ಸಾರಿಗೆ ಸಚಿವರೇ ಹೆಚ್ಚು ಕಡಿಮೆ ಆದ್ರೆ ಯಾರು ಜವಾಬ್ದಾರಿ?

17/10/2023, 21:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಟಯರಿಗೆ ನಟ್ ಬಿಗಿಯದೇ ಬಸ್ ಓಡಿಸುವುದನ್ನು ನೀವು ಎಲ್ಲದರು ನೋಡಿದ್ದೀರಾ? ನೋಡದಿದ್ದರೆ ಪರವಾಗಿಲ್ಲ, ಈಗ ನೋಡಿ ಬಿಡಿ. ಕೆಎಸ್ಸಾರ್ಟಿಸಿ ಬಸ್ಸನ್ನು ಟಯರಿಗೆ ನೆಟ್ ಹಾಕದೆ ಓಡಿಸಿದ ಘಟನೆ ನಡೆದಿದೆ.
ಇದು ನಡೆದದ್ದು ಚಿಕ್ಕಮಗಳೂರು-ಆಲ್ದೂರು ಮಾರ್ಗದ ಲೋಕಲ್ ಬಸ್ಸಿನಲ್ಲಿ.ಸರ್ಕಾರಿ ಬಸ್ಸಿನ ಚಕ್ರಕ್ಕೆ ನಟ್ ಗಳೇ ಇಲ್ಲ. ಇದೊಂದು ಸಾರಿಗೆ ಇಲಾಖೆಯ ಬಹು ದೊಡ್ಡ ಬೇಜವಾಬ್ದಾರಿಯಾಗಿದೆ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.
ಬಸ್ಸಿನ ಟಯರಿಗೆ 8 ನಟ್ ಇರಬೇಕಾದ ಜಾಗದಲ್ಲಿ 3 ನಟ್ ಮಾತ್ರ ಹಾಕಿ ಬಸ್ ಓಡಿಸಲಾಗಿದೆ.
ಅದೇ ಸ್ಥಿತಿಯಲ್ಲಿ ಬಸ್ಸನ್ನ ಚಾಲಕ ಓಡಿಸಿದ್ದಾರೆ. ನಿತ್ಯ ಶಾಲಾ-ಕಾಲೇಜು ಮಕ್ಕಳು, ವಿವಿಧ ಸಂಸ್ಥೆ ಗಳಲ್ಲಿ ಕೆಲಸ ಮಾಡುವವರು ಇದರಲ್ಲಿ ಪ್ರಯಾಣಿಸುತ್ತಾರೆ. ಮೊದಲೇ ಮಲೆನಾಡು, ಎತ್ತರದ ಬೆಟ್ಟ, ಆಳವಾದ ಕಂದಕದ ನಡುವೆ ಹಾವಿನಂತೆ ಸರಿದಾಡುವ ರಸ್ತೆಗಳು. ಏನಾದ್ರು ಹೆಚ್ಚು-ಕಡಿಮೆಯಾದರೆ ಜವಾಬ್ದಾರಿ ಯಾರು…?
ಸಾರಿಗೆ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಡಿಪೋಗೆ ಸೇರಿದ ಸರ್ಕಾರಿ ಬಸ್ ಇದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು