1:32 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಟಯರಿಗೆ ನಟ್ ಹಾಕದೆ ಬಸ್ ಓಡಾಟ: ಇದು ಚಿಕ್ಕಮಗಳೂರು ಡಿಪೋ ಕೆಎಸ್ಸಾರ್ಟಿಸಿ ಸ್ಪೆಷಾಲಿಟಿ; ಸಾರಿಗೆ ಸಚಿವರೇ ಹೆಚ್ಚು ಕಡಿಮೆ ಆದ್ರೆ ಯಾರು ಜವಾಬ್ದಾರಿ?

17/10/2023, 21:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಟಯರಿಗೆ ನಟ್ ಬಿಗಿಯದೇ ಬಸ್ ಓಡಿಸುವುದನ್ನು ನೀವು ಎಲ್ಲದರು ನೋಡಿದ್ದೀರಾ? ನೋಡದಿದ್ದರೆ ಪರವಾಗಿಲ್ಲ, ಈಗ ನೋಡಿ ಬಿಡಿ. ಕೆಎಸ್ಸಾರ್ಟಿಸಿ ಬಸ್ಸನ್ನು ಟಯರಿಗೆ ನೆಟ್ ಹಾಕದೆ ಓಡಿಸಿದ ಘಟನೆ ನಡೆದಿದೆ.
ಇದು ನಡೆದದ್ದು ಚಿಕ್ಕಮಗಳೂರು-ಆಲ್ದೂರು ಮಾರ್ಗದ ಲೋಕಲ್ ಬಸ್ಸಿನಲ್ಲಿ.ಸರ್ಕಾರಿ ಬಸ್ಸಿನ ಚಕ್ರಕ್ಕೆ ನಟ್ ಗಳೇ ಇಲ್ಲ. ಇದೊಂದು ಸಾರಿಗೆ ಇಲಾಖೆಯ ಬಹು ದೊಡ್ಡ ಬೇಜವಾಬ್ದಾರಿಯಾಗಿದೆ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.
ಬಸ್ಸಿನ ಟಯರಿಗೆ 8 ನಟ್ ಇರಬೇಕಾದ ಜಾಗದಲ್ಲಿ 3 ನಟ್ ಮಾತ್ರ ಹಾಕಿ ಬಸ್ ಓಡಿಸಲಾಗಿದೆ.
ಅದೇ ಸ್ಥಿತಿಯಲ್ಲಿ ಬಸ್ಸನ್ನ ಚಾಲಕ ಓಡಿಸಿದ್ದಾರೆ. ನಿತ್ಯ ಶಾಲಾ-ಕಾಲೇಜು ಮಕ್ಕಳು, ವಿವಿಧ ಸಂಸ್ಥೆ ಗಳಲ್ಲಿ ಕೆಲಸ ಮಾಡುವವರು ಇದರಲ್ಲಿ ಪ್ರಯಾಣಿಸುತ್ತಾರೆ. ಮೊದಲೇ ಮಲೆನಾಡು, ಎತ್ತರದ ಬೆಟ್ಟ, ಆಳವಾದ ಕಂದಕದ ನಡುವೆ ಹಾವಿನಂತೆ ಸರಿದಾಡುವ ರಸ್ತೆಗಳು. ಏನಾದ್ರು ಹೆಚ್ಚು-ಕಡಿಮೆಯಾದರೆ ಜವಾಬ್ದಾರಿ ಯಾರು…?
ಸಾರಿಗೆ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಡಿಪೋಗೆ ಸೇರಿದ ಸರ್ಕಾರಿ ಬಸ್ ಇದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು