4:54 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಟಿ.ಬಿ.ಜಯಚಂದ್ರ ಅವರಿಗೆ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ ಮುಖ್ಯಮಂತ್ರಿ ಪ್ರದಾನ

18/12/2024, 14:21

ಬೆಳಗಾವಿ ಸುವರ್ಣ ಸೌಧ (reporterkarnataka.com): ಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಿರಿಯ ಕಾಂಗ್ರೆಸ್ ಮುಖಂಡ ಟಿ.ಬಿ.ಜಯಚಂದ್ರ ಅವರು ‘ಅತ್ಯುತ್ತಮ ಶಾಸಕ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಈ ಇಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಸ್ಪೀಕರ್ ಯು.ಟಿ.ಖಾದರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸದನದ ಕಾರ್ಯಕಲಾಪಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಜೊತೆಗೆ ಉತ್ತಮ ಸಂಸದೀಯ ಪಟುವಾಗಿ ಚರ್ಚೆಯ ಗುಣಮಟ್ಟ ಹೆಚ್ಚಿಸಲು ಅವರು ನೀಡಿರುವ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.
7ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಅವರು ಪ್ರಸ್ತುತ ನವದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಧಾನಸಭೆಯಲ್ಲಿ ಪ್ರತಿಪಕ್ಷದ ಉಪನಾಯಕರಾಗಿ, ಕೃಷಿ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳು, ಪಶುಸಂಗೋಪನೆ, ಮುಜರಾಯಿ ಹಾಗೂ ಸಣ್ಣ ನೀರಾವರಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಅವರದ್ದಾಗಿದೆ. ಅಲ್ಲದೆ, ಈ ಮುನ್ನ ಕೂಡ ಅವರು ನವದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿಯಾಗಿದ್ದರು.
ಕೃಷಿ ಹಾಗೂ ನೀರಾವರಿ ಯೋಜನೆಗಳನ್ನು ರೂಪಿಸುವಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಾ ಬಂದಿರುವ ಇವರು, ಈ ಸಂಬಂಧ ವಿದೇಶಗಳಿಗೂ ಭೇಟಿ ನೀಡಿ ಆಳವಾದ ಅಧ್ಯಯನ ನಡೆಸಿದ್ದಾರೆ. ತುಮಕೂರು ಜಿಲ್ಲೆಗೆ ನೀರಾವರಿ ಸೌಲಭ್ಯ ಕಲ್ಪಿಸಲು ಅವಿರತವಾಗಿ ಶ್ರಮಿಸಿ ಗಮನಸೆಳೆದಿದ್ದಾರೆ.
ಜಯಚಂದ್ರ ಅವರಿಗೆ ಈ ಪ್ರಶಸ್ತಿ ಸಂದಿರುವ ಸಂದರ್ಭದಲ್ಲಿ ಜನಪ್ರತಿನಿಧಿಗಳು ಪಕ್ಷಭೇದವಿಲ್ಲದೆ ಅವರನ್ನು ಅಭಿನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು