3:42 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಟೀ ಮಾರುವ ವ್ಯಕ್ತಿ ದೇಶದ ಪ್ರಧಾನಿ ಆಗಲು ಇದೇ ಸಂವಿಧಾನ ಕಾರಣ: ನಂಜನಗೂಡು ಗಣರಾಜ್ಯೋತ್ಸವದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್

26/01/2024, 19:07

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ರಚಿಸಿದ ಸಂವಿಧಾನ ಜಾರಿಗೆ ಬಂದ ದಿನವನ್ನು ಗಣರಾಜ್ಯೋತ್ಸವವನ್ನಾಗಿ ಆಚರಣೆ ಮಾಡಲಾಗುತ್ತಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.


ನಂಜನಗೂಡು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಅವರು, ಇಂದು ಅಂಬೇಡ್ಕರ್ ಅವರನ್ನು ಸ್ಮರಿಸುವ ಮತ್ತು ಗೌರವ ಸಲ್ಲಿಸುವ ದಿನವಾಗಿದೆ. ಭಾರತ ದೇಶದಲ್ಲಿ ಹಲವಾರು ಧರ್ಮ, ಜಾತಿ ವ್ಯವಸ್ಥೆ, ವಿವಿಧ ಧಾರ್ಮಿಕ ಆಚರಣೆ, ಭಾಷೆ, ಜನರನ್ನು ಒಗ್ಗೂಡಿಸಿ ಮುನ್ನಡೆಸುವ ಗ್ರಂಥ ನಮ್ಮ ಸಂವಿಧಾನವಾಗಿದೆ.
ಸಂವಿಧಾನದ ಮೂಲಕ ನಮ್ಮ ಹಕ್ಕುಗಳನ್ನು ತಿಳಿದುಕೊಳ್ಳಲು ಮುಂದಾಗಬೇಕು ಹಾಗೂ ನಮ್ಮ ಮೂಲ ಕರ್ತವ್ಯಗಳನ್ನು ಅರಿತುಕೊಳ್ಳಬೇಕು. ಈ ಸಂವಿಧಾನದಿಂದ ನನ್ನನ್ನು ಕಿರಿಯ ಶಾಸಕನನ್ನಾಗಿ ಮಾಡಿದೆ. ಅದೇ ರೀತಿ ಟೀ ಮಾರುವ ವ್ಯಕ್ತಿ ದೇಶದ ಪ್ರಧಾನಿ ಆಗಲು ಇದೇ ಸಂವಿಧಾನ ಕಾರಣವಾಗಿದೆ.
ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಮತ್ತು ಸಂವಿಧಾನದ ಮೂಲ ತತ್ವಗಳನ್ನು ತಿಳಿಸಬೇಕು ಎಂದು ಕರೆ ನೀಡಿದರು.
ಇದಕ್ಕೂ ಮುನ್ನ ತಹಸಿಲ್ದಾರ್ ಶಿವಕುಮಾರ್ ಕಾಸನೂರ್ ಅವರು ಧ್ವಜಾರೋಹಣ ನೆರವೇರಿಸಿ ಶುಭ ಸಂದೇಶ ತಿಳಿಸಿದರು.
ಪೊಲೀಸರು ಮತ್ತು ವಿವಿಧ ಶಾಲಾ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನೆ ನಡೆಸಿ ಅತಿಥಿ ಗಣ್ಯರಿಗೆ ಗೌರವ ವಂದನೆ ಸಲ್ಲಿಸಿದರು.
ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಡಿವೈಎಸ್ಪಿ
ಗೋವಿಂದರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಟಿ. ಶಿವಲಿಂಗಯ್ಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ನಗರಸಭಾ ಆಯುಕ್ತ ನಂಜುಂಡಸ್ವಾಮಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು