2:22 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ದೇರೆಬೈಲ್‌ ಬ್ಲೂಬೆರ್ರಿ ಹಿಲ್ಸ್ ನಲ್ಲಿ ಟೆಕ್ ಪಾರ್ಕ್: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಸಂತಸ

10/10/2025, 13:25

ಮಂಗಳೂರು(reporterkarnataka.com): ನಗರದ ದೇರೆಬೈಲ್‌ ಬ್ಲೂಬೆರ್ರಿ ಹಿಲ್ಸ್ ರಸ್ತೆಯಲ್ಲಿ
ಟೆಕ್ ಪಾರ್ಕ್ ನಿರ್ಮಿಸಲು ರಾಜ್ಯ ಸಚಿವ ಸಂಪುಟ ನಿರ್ಣಯಿಸಿರುವುದು ಸ್ವಾಗತಾರ್ಹ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಪೂಜಾರಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ದೇರೆಬೈಲ್‌ನ ಬ್ಲೂಬೆರ್ರಿ ಹಿಲ್ಸ್ ರಸ್ತೆಯ ಸರ್ವೇ ನಂಬರ್ 129,113ರ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿಯಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ (ಡಿಬಿಎಫ್‌ಒಟಿ) ಆಧಾರದ ಮೇಲೆ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯಿಸಿರುವುದು ಸ್ವಾಗತಾರ್ಹ. ಇದರಿಂದ ಕರಾವಳಿಯಲ್ಲಿ ಸಹಸ್ರಾರು ಮಂದಿಗೆ ಉದ್ಯೋಗಾವಕಾಶ ಲಭಿಸಲಿದೆ. ಟೆಕ್ ಪಾರ್ಕ್ ನಿರ್ಮಾಣಕ್ಕೆ ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೃತಜ್ಞತೆಗಳು ಎಂದು ಪದ್ಮರಾಜ್ ಆರ್.ಪೂಜಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು