2:18 AM Friday2 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ – ಆಗುಂಬೆ ರಸ್ತೆಯಲ್ಲಿ ಅಪಾಯಕ್ಕೆ ಅಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು: ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯ

28/08/2024, 19:43

ರಶ್ಮಿ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ – ಆಗುಂಬೆ ಮಾರ್ಗದ ಬಾಳೆಬೈಲು ಸಮೀಪದ ಎಪಿಎಂಸಿ ಎದುರು ರಸ್ತೆಯ ಮಧ್ಯ ಭಾಗದಲ್ಲಿ ಬೃಹತ್ ಗಾತ್ರದ ಹೊಂಡವೊಂದು ಬಿದ್ದಿದ್ದು ಇದನ್ನು ಗಮನಿಸಿರುವ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಒಂದು ಬ್ಯಾರಿಕೇಡ್ ಅಳವಡಿಸಿದ್ದಾರೆ.
ಈ ಬ್ಯಾರಿಕೇಡ್ ಅಳವಡಿಸಿ ತಿಂಗಳಿಗೂ ಹೆಚ್ಚು ಸಮಯವಾಗಿದ್ದರೂ ಇಲ್ಲಿಯವರೆಗೆ ಯಾವುದೇ ರೀತಿಯ ಹೊಂಡ ಮುಚ್ಚುವ ಕೆಲಸ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ನಿರ್ವಹಿಸಲಿಲ್ಲ ಎಂಬ ಆಕ್ರೋಶದ ಮಾತುಗಳು ಅಲ್ಲಿನ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಈ ಹೊಂಡ ಮತ್ತು ಅಳವಡಿಸಿರುವ ಬ್ಯಾರಿಕೇಡ್ ರಾತ್ರಿ ಸಮಯದಲ್ಲಿ ಮಳೆ ಇರುವುದರಿಂದ ಮಂಜು ಮುಸುಕು ಆವರಿಸಿರುತ್ತದೆ. ಈ ಸಮಯದಲ್ಲಿ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರಿಗೆ ಹೊಂಡ ಮತ್ತು ಬ್ಯಾರಿಕೇಡ್ ಕಾಣದೇ ಹತ್ತಿರ ಹೋಗಿ ನಿಂತು ಕೋಪದಿಂದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿ ಹೋಗುತ್ತಿದ್ದಾರೆ.

ಇದಲ್ಲದೆ ಯಡೇಹಳ್ಳಿಕೆರೆ ಹತ್ತಿರ ಮರ್ಕಣ್ಣನ ಗ್ಯಾರೇಜ್ ಎದುರು ರಸ್ತೆಯಲ್ಲಿ ಹೊಂಡ ಗುಂಡಿಗಳು ಬಿದ್ದಿದ್ದು ಮಳೆಯಿಂದಾಗಿ ಹೊಂಡದಲ್ಲಿ ನೀರು ನಿಂತಿದೆ. ಇನ್ನು ಪಟ್ಟಣದ ಹೃದಯ ಭಾಗವಾಗಿರುವ ಕೊಪ್ಪ ಸರ್ಕಲ್ ನಲ್ಲಿ ಒಂದು ಬಾರಿ ಸರಿಪಡಿಸಿದರೂ ಕೂಡ ಪುನಃ ಹೊಂಡ ಗುಂಡಿಗಳು ಬಿದ್ದಿದ್ದು ಇವೆಲ್ಲವೂ ಕೂಡ ಯಾವುದೇ ಸಮಯದಲ್ಲಿ ಅಪಘಾತಕ್ಕೆ ಅಹ್ವಾನ ನೀಡುತ್ತಿದೆ.
ಇನ್ನಾದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಗಮನಿಸಿ ಹೊಂಡ ಗುಂಡಿ ಮುಚ್ಚುವ ಕೆಲಸ ಮಾಡಲಿ ಎಂಬ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು