4:51 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ – ಆಗುಂಬೆ ರಸ್ತೆಯಲ್ಲಿ ಅಪಾಯಕ್ಕೆ ಅಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು: ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯ

28/08/2024, 19:43

ರಶ್ಮಿ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ – ಆಗುಂಬೆ ಮಾರ್ಗದ ಬಾಳೆಬೈಲು ಸಮೀಪದ ಎಪಿಎಂಸಿ ಎದುರು ರಸ್ತೆಯ ಮಧ್ಯ ಭಾಗದಲ್ಲಿ ಬೃಹತ್ ಗಾತ್ರದ ಹೊಂಡವೊಂದು ಬಿದ್ದಿದ್ದು ಇದನ್ನು ಗಮನಿಸಿರುವ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಒಂದು ಬ್ಯಾರಿಕೇಡ್ ಅಳವಡಿಸಿದ್ದಾರೆ.
ಈ ಬ್ಯಾರಿಕೇಡ್ ಅಳವಡಿಸಿ ತಿಂಗಳಿಗೂ ಹೆಚ್ಚು ಸಮಯವಾಗಿದ್ದರೂ ಇಲ್ಲಿಯವರೆಗೆ ಯಾವುದೇ ರೀತಿಯ ಹೊಂಡ ಮುಚ್ಚುವ ಕೆಲಸ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ನಿರ್ವಹಿಸಲಿಲ್ಲ ಎಂಬ ಆಕ್ರೋಶದ ಮಾತುಗಳು ಅಲ್ಲಿನ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಈ ಹೊಂಡ ಮತ್ತು ಅಳವಡಿಸಿರುವ ಬ್ಯಾರಿಕೇಡ್ ರಾತ್ರಿ ಸಮಯದಲ್ಲಿ ಮಳೆ ಇರುವುದರಿಂದ ಮಂಜು ಮುಸುಕು ಆವರಿಸಿರುತ್ತದೆ. ಈ ಸಮಯದಲ್ಲಿ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರಿಗೆ ಹೊಂಡ ಮತ್ತು ಬ್ಯಾರಿಕೇಡ್ ಕಾಣದೇ ಹತ್ತಿರ ಹೋಗಿ ನಿಂತು ಕೋಪದಿಂದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿ ಹೋಗುತ್ತಿದ್ದಾರೆ.

ಇದಲ್ಲದೆ ಯಡೇಹಳ್ಳಿಕೆರೆ ಹತ್ತಿರ ಮರ್ಕಣ್ಣನ ಗ್ಯಾರೇಜ್ ಎದುರು ರಸ್ತೆಯಲ್ಲಿ ಹೊಂಡ ಗುಂಡಿಗಳು ಬಿದ್ದಿದ್ದು ಮಳೆಯಿಂದಾಗಿ ಹೊಂಡದಲ್ಲಿ ನೀರು ನಿಂತಿದೆ. ಇನ್ನು ಪಟ್ಟಣದ ಹೃದಯ ಭಾಗವಾಗಿರುವ ಕೊಪ್ಪ ಸರ್ಕಲ್ ನಲ್ಲಿ ಒಂದು ಬಾರಿ ಸರಿಪಡಿಸಿದರೂ ಕೂಡ ಪುನಃ ಹೊಂಡ ಗುಂಡಿಗಳು ಬಿದ್ದಿದ್ದು ಇವೆಲ್ಲವೂ ಕೂಡ ಯಾವುದೇ ಸಮಯದಲ್ಲಿ ಅಪಘಾತಕ್ಕೆ ಅಹ್ವಾನ ನೀಡುತ್ತಿದೆ.
ಇನ್ನಾದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಗಮನಿಸಿ ಹೊಂಡ ಗುಂಡಿ ಮುಚ್ಚುವ ಕೆಲಸ ಮಾಡಲಿ ಎಂಬ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು