5:58 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ – ಆಗುಂಬೆ ರಸ್ತೆಯಲ್ಲಿ ಅಪಾಯಕ್ಕೆ ಅಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು: ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯ

28/08/2024, 19:43

ರಶ್ಮಿ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ – ಆಗುಂಬೆ ಮಾರ್ಗದ ಬಾಳೆಬೈಲು ಸಮೀಪದ ಎಪಿಎಂಸಿ ಎದುರು ರಸ್ತೆಯ ಮಧ್ಯ ಭಾಗದಲ್ಲಿ ಬೃಹತ್ ಗಾತ್ರದ ಹೊಂಡವೊಂದು ಬಿದ್ದಿದ್ದು ಇದನ್ನು ಗಮನಿಸಿರುವ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಒಂದು ಬ್ಯಾರಿಕೇಡ್ ಅಳವಡಿಸಿದ್ದಾರೆ.
ಈ ಬ್ಯಾರಿಕೇಡ್ ಅಳವಡಿಸಿ ತಿಂಗಳಿಗೂ ಹೆಚ್ಚು ಸಮಯವಾಗಿದ್ದರೂ ಇಲ್ಲಿಯವರೆಗೆ ಯಾವುದೇ ರೀತಿಯ ಹೊಂಡ ಮುಚ್ಚುವ ಕೆಲಸ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ನಿರ್ವಹಿಸಲಿಲ್ಲ ಎಂಬ ಆಕ್ರೋಶದ ಮಾತುಗಳು ಅಲ್ಲಿನ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಈ ಹೊಂಡ ಮತ್ತು ಅಳವಡಿಸಿರುವ ಬ್ಯಾರಿಕೇಡ್ ರಾತ್ರಿ ಸಮಯದಲ್ಲಿ ಮಳೆ ಇರುವುದರಿಂದ ಮಂಜು ಮುಸುಕು ಆವರಿಸಿರುತ್ತದೆ. ಈ ಸಮಯದಲ್ಲಿ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರಿಗೆ ಹೊಂಡ ಮತ್ತು ಬ್ಯಾರಿಕೇಡ್ ಕಾಣದೇ ಹತ್ತಿರ ಹೋಗಿ ನಿಂತು ಕೋಪದಿಂದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿ ಹೋಗುತ್ತಿದ್ದಾರೆ.

ಇದಲ್ಲದೆ ಯಡೇಹಳ್ಳಿಕೆರೆ ಹತ್ತಿರ ಮರ್ಕಣ್ಣನ ಗ್ಯಾರೇಜ್ ಎದುರು ರಸ್ತೆಯಲ್ಲಿ ಹೊಂಡ ಗುಂಡಿಗಳು ಬಿದ್ದಿದ್ದು ಮಳೆಯಿಂದಾಗಿ ಹೊಂಡದಲ್ಲಿ ನೀರು ನಿಂತಿದೆ. ಇನ್ನು ಪಟ್ಟಣದ ಹೃದಯ ಭಾಗವಾಗಿರುವ ಕೊಪ್ಪ ಸರ್ಕಲ್ ನಲ್ಲಿ ಒಂದು ಬಾರಿ ಸರಿಪಡಿಸಿದರೂ ಕೂಡ ಪುನಃ ಹೊಂಡ ಗುಂಡಿಗಳು ಬಿದ್ದಿದ್ದು ಇವೆಲ್ಲವೂ ಕೂಡ ಯಾವುದೇ ಸಮಯದಲ್ಲಿ ಅಪಘಾತಕ್ಕೆ ಅಹ್ವಾನ ನೀಡುತ್ತಿದೆ.
ಇನ್ನಾದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಗಮನಿಸಿ ಹೊಂಡ ಗುಂಡಿ ಮುಚ್ಚುವ ಕೆಲಸ ಮಾಡಲಿ ಎಂಬ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು