1:47 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ – ಆಗುಂಬೆ ರಸ್ತೆಯಲ್ಲಿ ಅಪಾಯಕ್ಕೆ ಅಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು: ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯ

28/08/2024, 19:43

ರಶ್ಮಿ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ – ಆಗುಂಬೆ ಮಾರ್ಗದ ಬಾಳೆಬೈಲು ಸಮೀಪದ ಎಪಿಎಂಸಿ ಎದುರು ರಸ್ತೆಯ ಮಧ್ಯ ಭಾಗದಲ್ಲಿ ಬೃಹತ್ ಗಾತ್ರದ ಹೊಂಡವೊಂದು ಬಿದ್ದಿದ್ದು ಇದನ್ನು ಗಮನಿಸಿರುವ ಪೊಲೀಸ್ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ಒಂದು ಬ್ಯಾರಿಕೇಡ್ ಅಳವಡಿಸಿದ್ದಾರೆ.
ಈ ಬ್ಯಾರಿಕೇಡ್ ಅಳವಡಿಸಿ ತಿಂಗಳಿಗೂ ಹೆಚ್ಚು ಸಮಯವಾಗಿದ್ದರೂ ಇಲ್ಲಿಯವರೆಗೆ ಯಾವುದೇ ರೀತಿಯ ಹೊಂಡ ಮುಚ್ಚುವ ಕೆಲಸ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ನಿರ್ವಹಿಸಲಿಲ್ಲ ಎಂಬ ಆಕ್ರೋಶದ ಮಾತುಗಳು ಅಲ್ಲಿನ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಈ ಹೊಂಡ ಮತ್ತು ಅಳವಡಿಸಿರುವ ಬ್ಯಾರಿಕೇಡ್ ರಾತ್ರಿ ಸಮಯದಲ್ಲಿ ಮಳೆ ಇರುವುದರಿಂದ ಮಂಜು ಮುಸುಕು ಆವರಿಸಿರುತ್ತದೆ. ಈ ಸಮಯದಲ್ಲಿ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರಿಗೆ ಹೊಂಡ ಮತ್ತು ಬ್ಯಾರಿಕೇಡ್ ಕಾಣದೇ ಹತ್ತಿರ ಹೋಗಿ ನಿಂತು ಕೋಪದಿಂದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿ ಹೋಗುತ್ತಿದ್ದಾರೆ.

ಇದಲ್ಲದೆ ಯಡೇಹಳ್ಳಿಕೆರೆ ಹತ್ತಿರ ಮರ್ಕಣ್ಣನ ಗ್ಯಾರೇಜ್ ಎದುರು ರಸ್ತೆಯಲ್ಲಿ ಹೊಂಡ ಗುಂಡಿಗಳು ಬಿದ್ದಿದ್ದು ಮಳೆಯಿಂದಾಗಿ ಹೊಂಡದಲ್ಲಿ ನೀರು ನಿಂತಿದೆ. ಇನ್ನು ಪಟ್ಟಣದ ಹೃದಯ ಭಾಗವಾಗಿರುವ ಕೊಪ್ಪ ಸರ್ಕಲ್ ನಲ್ಲಿ ಒಂದು ಬಾರಿ ಸರಿಪಡಿಸಿದರೂ ಕೂಡ ಪುನಃ ಹೊಂಡ ಗುಂಡಿಗಳು ಬಿದ್ದಿದ್ದು ಇವೆಲ್ಲವೂ ಕೂಡ ಯಾವುದೇ ಸಮಯದಲ್ಲಿ ಅಪಘಾತಕ್ಕೆ ಅಹ್ವಾನ ನೀಡುತ್ತಿದೆ.
ಇನ್ನಾದರೂ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಗಮನಿಸಿ ಹೊಂಡ ಗುಂಡಿ ಮುಚ್ಚುವ ಕೆಲಸ ಮಾಡಲಿ ಎಂಬ ಮಾತು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು