3:41 AM Monday12 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: 2 ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು

12/08/2024, 23:11

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಕಾಲೇಜು ವಿದ್ಯಾರ್ಥಿಗಳಿಗೆ ಪಟ್ಟಣದ ವಿವಿಧ ಭಾಗದಲ್ಲಿನ ಕಾಲೇಜು ಸಮೀಪದ ಪೆಟ್ಟಿಗೆ ಅಂಗಡಿಗಳಲ್ಲಿ ಸಿಗರೇಟ್ ಹಾಗೂ ಪಾನ್ ಪರಾಕ್ ನೀಡುತ್ತಿದ್ದ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ತೀರ್ಥಹಳ್ಳಿಯ ಪೊಲೀಸ್ ಅಧಿಕಾರಿ, ಡಿವೈಎಸ್’ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ದಾಳಿ ನೆಡೆಸಿ ಎರಡು ಅಂಗಡಿಗಳ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.
ಪಟ್ಟಣದ ಯಡೇಹಳ್ಳಿಕೆರೆ ಸಮೀಪದ ಸಹ್ಯಾದ್ರಿ ಪಾಲಿಟೇಕ್ನಿಕ್ ಕಾಲೇಜು ಅಕ್ಕ ಪಕ್ಕದ ಎರಡು ಪೆಟ್ಟಿಗೆ ಅಂಗಡಿಗಳಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸಿಗರೇಟ್ ಹಾಗೂ ಪಾನ್ ಪರಾಕ್ ನೀಡುತ್ತಿರುವ ಬಗ್ಗೆ ದೂರು ಕೇಳಿ ಬಂದಿತ್ತು. ಸ್ಥಳಕ್ಕೆ ಭೇಟಿ ನೀಡಿ ಮಾದಕ ವಸ್ತು ನೀಡುತ್ತಿದ್ದಾರೆ ಎಂಬ ಕಾರಣದಿಂದ ಎರಡು ಅಂಗಡಿ ಮಾಲೀಕರ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.
ಉಳಿದಂತೆ ಪಟ್ಟಣದ ವಿವಿಧ ಭಾಗದಲ್ಲಿ ಕಾಲೇಜು ಸಮೀಪ ಇರುವ ಅಂಗಡಿಗಳಲ್ಲಿ ಮಕ್ಕಳಿಗೆ ಸಿಗರೇಟ್ ಹಾಗೂ ಪಾನ್ ಪರಾಕ್ ಸೇರಿ ಮಾದಕ ವಸ್ತು ಮಾರಾಟ ಮಾಡುವುದು ತಿಳಿದು ಬಂದರೆ ಕೂಡಲೇ ಮುಟ್ಟುಗೊಲು ಮಾಡಿಕೊಳ್ಳುವುದರ ಜೊತೆಗೆ ಕೇಸ್ ದಾಖಲು ಮಾಡಲಾಗುತ್ತದೆ ಎಂದು
ಡಿವೈಎಸ್’ಪಿ ಗಜಾನನ ವಾಮನ ಸುತಾರ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು