6:40 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: 2 ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು

12/08/2024, 23:11

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಕಾಲೇಜು ವಿದ್ಯಾರ್ಥಿಗಳಿಗೆ ಪಟ್ಟಣದ ವಿವಿಧ ಭಾಗದಲ್ಲಿನ ಕಾಲೇಜು ಸಮೀಪದ ಪೆಟ್ಟಿಗೆ ಅಂಗಡಿಗಳಲ್ಲಿ ಸಿಗರೇಟ್ ಹಾಗೂ ಪಾನ್ ಪರಾಕ್ ನೀಡುತ್ತಿದ್ದ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ತೀರ್ಥಹಳ್ಳಿಯ ಪೊಲೀಸ್ ಅಧಿಕಾರಿ, ಡಿವೈಎಸ್’ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ದಾಳಿ ನೆಡೆಸಿ ಎರಡು ಅಂಗಡಿಗಳ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.
ಪಟ್ಟಣದ ಯಡೇಹಳ್ಳಿಕೆರೆ ಸಮೀಪದ ಸಹ್ಯಾದ್ರಿ ಪಾಲಿಟೇಕ್ನಿಕ್ ಕಾಲೇಜು ಅಕ್ಕ ಪಕ್ಕದ ಎರಡು ಪೆಟ್ಟಿಗೆ ಅಂಗಡಿಗಳಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸಿಗರೇಟ್ ಹಾಗೂ ಪಾನ್ ಪರಾಕ್ ನೀಡುತ್ತಿರುವ ಬಗ್ಗೆ ದೂರು ಕೇಳಿ ಬಂದಿತ್ತು. ಸ್ಥಳಕ್ಕೆ ಭೇಟಿ ನೀಡಿ ಮಾದಕ ವಸ್ತು ನೀಡುತ್ತಿದ್ದಾರೆ ಎಂಬ ಕಾರಣದಿಂದ ಎರಡು ಅಂಗಡಿ ಮಾಲೀಕರ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.
ಉಳಿದಂತೆ ಪಟ್ಟಣದ ವಿವಿಧ ಭಾಗದಲ್ಲಿ ಕಾಲೇಜು ಸಮೀಪ ಇರುವ ಅಂಗಡಿಗಳಲ್ಲಿ ಮಕ್ಕಳಿಗೆ ಸಿಗರೇಟ್ ಹಾಗೂ ಪಾನ್ ಪರಾಕ್ ಸೇರಿ ಮಾದಕ ವಸ್ತು ಮಾರಾಟ ಮಾಡುವುದು ತಿಳಿದು ಬಂದರೆ ಕೂಡಲೇ ಮುಟ್ಟುಗೊಲು ಮಾಡಿಕೊಳ್ಳುವುದರ ಜೊತೆಗೆ ಕೇಸ್ ದಾಖಲು ಮಾಡಲಾಗುತ್ತದೆ ಎಂದು
ಡಿವೈಎಸ್’ಪಿ ಗಜಾನನ ವಾಮನ ಸುತಾರ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು