9:26 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ ಪಂಗನಾಮ!

25/09/2024, 15:49

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಆನ್ಲೈನ್ ನಲ್ಲಿ ಯುಪಿಐ ಸ್ಕ್ಯಾನ್ ಮಾಡಿ ಹಣ ಸಂದಾಯ ಮಾಡಿದ ರೀತಿಯಲ್ಲಿ ನಾಟಕವಾಡಿ 5000 ರೂ. ಹಣವನ್ನು ವಂಚಿಸಿದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಪಟ್ಟಣದ ಗಾಂಧಿಚೌಕದ ಕರ್ಣಾಟಕ ಬ್ಯಾಂಕ್ ಎಟಿಎಂ ಪಕ್ಕದ ಮೊಬೈಲ್ ಅಂಗಡಿಯಲ್ಲಿ ಅನಾಮಿಕ ವ್ಯಕ್ತಿಯೋರ್ವ ಕ್ಯಾಶ್ ಹಣ ಬೇಕು, ನಿಮಗೆ ಗೂಗಲ್ ಪೆ ಮಾಡುತ್ತೇನೆ ಎಂದು ಹಣವನ್ನ ಪಡೆದು ಮೊಬೈಲ್ ಮೂಲಕ ಅಕೌಂಟ್ ಯುಪಿಐ ಸ್ಕ್ಯಾನ್ ಮಾಡಿದ್ದಾನೆ. ನಂತರ ಹಣ ವರ್ಗಾವಣೆ ಆಗಿರುವ ಬಗ್ಗೆ ಟ್ರಾನ್ಸ್ಫರ್ ಅಂತ ಡಿಸ್ಪ್ಲೇಯಲ್ಲಿ ಬಂದಿದ್ದನ್ನು ತೋರಿಸಿ ಮಾಹಿತಿ ನೀಡಿದ್ದಾನೆ. ಇದೇ ಕಾರಣಕ್ಕೆ ಹಣವನ್ನು ನೀಡಲಾಗಿದೆ. ಆದ್ರೆ ಹಣವನ್ನ ಅಕೌಂಟ್ ಗೆ ಟ್ರಾನ್ಸ್ಫರ್ ಮಾಡದೆ ಡಿಜಿಟಲ್ ಮೋಸವನ್ನು ಮಾಡಿದ್ದಾನೆ.
ತಿಪ್ಪೇಸ್ವಾಮಿ ಎಂಬ ಹೆಸರನ್ನು ಆತ ಹೇಳಿದ್ದಾನೆ. ಆದರೆ ಆತ ಯಾರು? ಎಂಬ ಸ್ಪಷ್ಟತೆ ಇಲ್ಲ. ಈ ಬಗ್ಗೆ ತೀರ್ಥಹಳ್ಳಿ ಪೊಲೀಸರಿಗೆ ಕೂಡ ದೂರನ್ನು ನೀಡುವ ಹಂತದಲ್ಲಿ ಈ ಪ್ರಕರಣ ಹೋಗಿದೆ.
ಈಗಾಗಲೇ ಡಿಜಿಟಲ್ ವ್ಯವಹಾರದ ಬಗ್ಗೆ ತೀವ್ರ ಗಮನವಹಿಸಿ ಎಂದು ಪೊಲೀಸರು ಎಷ್ಟೇ ತಿಳಿಸಿದರು ಸಹ ಜನ ಅದರ ಬಗ್ಗೆ ಎಚ್ಛೆತ್ತಿಲ್ಲ.
ಆದಷ್ಟು ಈ ಬಗ್ಗೆ ಜನರು ಡಿಜಿಟಲ್ ವ್ಯವಹಾರದ ಬಗ್ಗೆ ಗಮನ ಹರಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು