5:52 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ ಪಂಗನಾಮ!

25/09/2024, 15:49

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಆನ್ಲೈನ್ ನಲ್ಲಿ ಯುಪಿಐ ಸ್ಕ್ಯಾನ್ ಮಾಡಿ ಹಣ ಸಂದಾಯ ಮಾಡಿದ ರೀತಿಯಲ್ಲಿ ನಾಟಕವಾಡಿ 5000 ರೂ. ಹಣವನ್ನು ವಂಚಿಸಿದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಪಟ್ಟಣದ ಗಾಂಧಿಚೌಕದ ಕರ್ಣಾಟಕ ಬ್ಯಾಂಕ್ ಎಟಿಎಂ ಪಕ್ಕದ ಮೊಬೈಲ್ ಅಂಗಡಿಯಲ್ಲಿ ಅನಾಮಿಕ ವ್ಯಕ್ತಿಯೋರ್ವ ಕ್ಯಾಶ್ ಹಣ ಬೇಕು, ನಿಮಗೆ ಗೂಗಲ್ ಪೆ ಮಾಡುತ್ತೇನೆ ಎಂದು ಹಣವನ್ನ ಪಡೆದು ಮೊಬೈಲ್ ಮೂಲಕ ಅಕೌಂಟ್ ಯುಪಿಐ ಸ್ಕ್ಯಾನ್ ಮಾಡಿದ್ದಾನೆ. ನಂತರ ಹಣ ವರ್ಗಾವಣೆ ಆಗಿರುವ ಬಗ್ಗೆ ಟ್ರಾನ್ಸ್ಫರ್ ಅಂತ ಡಿಸ್ಪ್ಲೇಯಲ್ಲಿ ಬಂದಿದ್ದನ್ನು ತೋರಿಸಿ ಮಾಹಿತಿ ನೀಡಿದ್ದಾನೆ. ಇದೇ ಕಾರಣಕ್ಕೆ ಹಣವನ್ನು ನೀಡಲಾಗಿದೆ. ಆದ್ರೆ ಹಣವನ್ನ ಅಕೌಂಟ್ ಗೆ ಟ್ರಾನ್ಸ್ಫರ್ ಮಾಡದೆ ಡಿಜಿಟಲ್ ಮೋಸವನ್ನು ಮಾಡಿದ್ದಾನೆ.
ತಿಪ್ಪೇಸ್ವಾಮಿ ಎಂಬ ಹೆಸರನ್ನು ಆತ ಹೇಳಿದ್ದಾನೆ. ಆದರೆ ಆತ ಯಾರು? ಎಂಬ ಸ್ಪಷ್ಟತೆ ಇಲ್ಲ. ಈ ಬಗ್ಗೆ ತೀರ್ಥಹಳ್ಳಿ ಪೊಲೀಸರಿಗೆ ಕೂಡ ದೂರನ್ನು ನೀಡುವ ಹಂತದಲ್ಲಿ ಈ ಪ್ರಕರಣ ಹೋಗಿದೆ.
ಈಗಾಗಲೇ ಡಿಜಿಟಲ್ ವ್ಯವಹಾರದ ಬಗ್ಗೆ ತೀವ್ರ ಗಮನವಹಿಸಿ ಎಂದು ಪೊಲೀಸರು ಎಷ್ಟೇ ತಿಳಿಸಿದರು ಸಹ ಜನ ಅದರ ಬಗ್ಗೆ ಎಚ್ಛೆತ್ತಿಲ್ಲ.
ಆದಷ್ಟು ಈ ಬಗ್ಗೆ ಜನರು ಡಿಜಿಟಲ್ ವ್ಯವಹಾರದ ಬಗ್ಗೆ ಗಮನ ಹರಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು