10:13 PM Monday22 - December 2025
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ ಪಂಗನಾಮ!

25/09/2024, 15:49

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಆನ್ಲೈನ್ ನಲ್ಲಿ ಯುಪಿಐ ಸ್ಕ್ಯಾನ್ ಮಾಡಿ ಹಣ ಸಂದಾಯ ಮಾಡಿದ ರೀತಿಯಲ್ಲಿ ನಾಟಕವಾಡಿ 5000 ರೂ. ಹಣವನ್ನು ವಂಚಿಸಿದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಪಟ್ಟಣದ ಗಾಂಧಿಚೌಕದ ಕರ್ಣಾಟಕ ಬ್ಯಾಂಕ್ ಎಟಿಎಂ ಪಕ್ಕದ ಮೊಬೈಲ್ ಅಂಗಡಿಯಲ್ಲಿ ಅನಾಮಿಕ ವ್ಯಕ್ತಿಯೋರ್ವ ಕ್ಯಾಶ್ ಹಣ ಬೇಕು, ನಿಮಗೆ ಗೂಗಲ್ ಪೆ ಮಾಡುತ್ತೇನೆ ಎಂದು ಹಣವನ್ನ ಪಡೆದು ಮೊಬೈಲ್ ಮೂಲಕ ಅಕೌಂಟ್ ಯುಪಿಐ ಸ್ಕ್ಯಾನ್ ಮಾಡಿದ್ದಾನೆ. ನಂತರ ಹಣ ವರ್ಗಾವಣೆ ಆಗಿರುವ ಬಗ್ಗೆ ಟ್ರಾನ್ಸ್ಫರ್ ಅಂತ ಡಿಸ್ಪ್ಲೇಯಲ್ಲಿ ಬಂದಿದ್ದನ್ನು ತೋರಿಸಿ ಮಾಹಿತಿ ನೀಡಿದ್ದಾನೆ. ಇದೇ ಕಾರಣಕ್ಕೆ ಹಣವನ್ನು ನೀಡಲಾಗಿದೆ. ಆದ್ರೆ ಹಣವನ್ನ ಅಕೌಂಟ್ ಗೆ ಟ್ರಾನ್ಸ್ಫರ್ ಮಾಡದೆ ಡಿಜಿಟಲ್ ಮೋಸವನ್ನು ಮಾಡಿದ್ದಾನೆ.
ತಿಪ್ಪೇಸ್ವಾಮಿ ಎಂಬ ಹೆಸರನ್ನು ಆತ ಹೇಳಿದ್ದಾನೆ. ಆದರೆ ಆತ ಯಾರು? ಎಂಬ ಸ್ಪಷ್ಟತೆ ಇಲ್ಲ. ಈ ಬಗ್ಗೆ ತೀರ್ಥಹಳ್ಳಿ ಪೊಲೀಸರಿಗೆ ಕೂಡ ದೂರನ್ನು ನೀಡುವ ಹಂತದಲ್ಲಿ ಈ ಪ್ರಕರಣ ಹೋಗಿದೆ.
ಈಗಾಗಲೇ ಡಿಜಿಟಲ್ ವ್ಯವಹಾರದ ಬಗ್ಗೆ ತೀವ್ರ ಗಮನವಹಿಸಿ ಎಂದು ಪೊಲೀಸರು ಎಷ್ಟೇ ತಿಳಿಸಿದರು ಸಹ ಜನ ಅದರ ಬಗ್ಗೆ ಎಚ್ಛೆತ್ತಿಲ್ಲ.
ಆದಷ್ಟು ಈ ಬಗ್ಗೆ ಜನರು ಡಿಜಿಟಲ್ ವ್ಯವಹಾರದ ಬಗ್ಗೆ ಗಮನ ಹರಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು