8:33 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ ಪಂಗನಾಮ!

25/09/2024, 15:49

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಆನ್ಲೈನ್ ನಲ್ಲಿ ಯುಪಿಐ ಸ್ಕ್ಯಾನ್ ಮಾಡಿ ಹಣ ಸಂದಾಯ ಮಾಡಿದ ರೀತಿಯಲ್ಲಿ ನಾಟಕವಾಡಿ 5000 ರೂ. ಹಣವನ್ನು ವಂಚಿಸಿದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಪಟ್ಟಣದ ಗಾಂಧಿಚೌಕದ ಕರ್ಣಾಟಕ ಬ್ಯಾಂಕ್ ಎಟಿಎಂ ಪಕ್ಕದ ಮೊಬೈಲ್ ಅಂಗಡಿಯಲ್ಲಿ ಅನಾಮಿಕ ವ್ಯಕ್ತಿಯೋರ್ವ ಕ್ಯಾಶ್ ಹಣ ಬೇಕು, ನಿಮಗೆ ಗೂಗಲ್ ಪೆ ಮಾಡುತ್ತೇನೆ ಎಂದು ಹಣವನ್ನ ಪಡೆದು ಮೊಬೈಲ್ ಮೂಲಕ ಅಕೌಂಟ್ ಯುಪಿಐ ಸ್ಕ್ಯಾನ್ ಮಾಡಿದ್ದಾನೆ. ನಂತರ ಹಣ ವರ್ಗಾವಣೆ ಆಗಿರುವ ಬಗ್ಗೆ ಟ್ರಾನ್ಸ್ಫರ್ ಅಂತ ಡಿಸ್ಪ್ಲೇಯಲ್ಲಿ ಬಂದಿದ್ದನ್ನು ತೋರಿಸಿ ಮಾಹಿತಿ ನೀಡಿದ್ದಾನೆ. ಇದೇ ಕಾರಣಕ್ಕೆ ಹಣವನ್ನು ನೀಡಲಾಗಿದೆ. ಆದ್ರೆ ಹಣವನ್ನ ಅಕೌಂಟ್ ಗೆ ಟ್ರಾನ್ಸ್ಫರ್ ಮಾಡದೆ ಡಿಜಿಟಲ್ ಮೋಸವನ್ನು ಮಾಡಿದ್ದಾನೆ.
ತಿಪ್ಪೇಸ್ವಾಮಿ ಎಂಬ ಹೆಸರನ್ನು ಆತ ಹೇಳಿದ್ದಾನೆ. ಆದರೆ ಆತ ಯಾರು? ಎಂಬ ಸ್ಪಷ್ಟತೆ ಇಲ್ಲ. ಈ ಬಗ್ಗೆ ತೀರ್ಥಹಳ್ಳಿ ಪೊಲೀಸರಿಗೆ ಕೂಡ ದೂರನ್ನು ನೀಡುವ ಹಂತದಲ್ಲಿ ಈ ಪ್ರಕರಣ ಹೋಗಿದೆ.
ಈಗಾಗಲೇ ಡಿಜಿಟಲ್ ವ್ಯವಹಾರದ ಬಗ್ಗೆ ತೀವ್ರ ಗಮನವಹಿಸಿ ಎಂದು ಪೊಲೀಸರು ಎಷ್ಟೇ ತಿಳಿಸಿದರು ಸಹ ಜನ ಅದರ ಬಗ್ಗೆ ಎಚ್ಛೆತ್ತಿಲ್ಲ.
ಆದಷ್ಟು ಈ ಬಗ್ಗೆ ಜನರು ಡಿಜಿಟಲ್ ವ್ಯವಹಾರದ ಬಗ್ಗೆ ಗಮನ ಹರಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು