2:27 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಚುನಾವಣೆ ಸಮಯದಲ್ಲಿ ರಾಮ ರಾಮ; ವರ್ಷವಾದ ನಂತರ ರಾಮನಿಗೆ ನಾಮ..!?

22/01/2025, 13:35

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಕಳೆದ ವರ್ಷ 2024ರ ಜನವರಿ 22ರಂದು ಇಡೀ ದೇಶದಲ್ಲಿ ಸಂಭ್ರಮ ಮನೆ ಮಾಡಿತ್ತು.
ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮಚಂದ್ರನ ಪ್ರಾಣ ಪ್ರತಿಷ್ಠೆ ಅತ್ಯಂತ ವೈಭವದಿಂದ ನಡೆದಿತ್ತು. ಇದರ ಹಿನ್ನಲೆ ಪ್ರತಿ ಊರು, ಗ್ರಾಮ ಹಳ್ಳಿ ಹಳ್ಳಿಗಳಲ್ಲಿ ರಾಜಕೀಯ ಮುಖಂಡರ ನೇತೃತ್ವದಲ್ಲಿ ಪೂಜೆ ಪುನಸ್ಕಾರ ನಡೆದವು. ಆದರೆ ಈ ಬಾರಿ ಅವೆಲ್ಲವೂ ಮಾಯವಾಗಿವೆ.!
ಹೌದು, ತೀರ್ಥಹಳ್ಳಿಯ ರಥಬೀದಿಯಲ್ಲಿರುವ ಸಮಗೋಡು ಶ್ರೀ ಕೋದಂಡರಾಮ ದೇವಸ್ಥಾನದಲ್ಲಿ ಕಳೆದ ಬಾರಿ ರಾಜಕೀಯ ಮುಖಂಡರ ನೇತೃತ್ವದಲ್ಲಿ ಪೂಜೆ, ಹೋಮ, ಹವನ, ದೇವರಿಗೆ ವಿಶೇಷ ಅಲಂಕಾರ ಎಲ್ಲವನ್ನು ಮಾಡಲಾಗಿತ್ತು. ಅಷ್ಟೇ ಅಲ್ಲದೆ ದೇವಸ್ಥಾನದ ಸುತ್ತ ಮುತ್ತಲೂ ಸ್ವಚ್ಛತೆ ಮಾಡಲಾಗಿತ್ತು. ಆದರೆ ಈ ಬಾರಿ ದೇವಸ್ಥಾನ ಸಂಪೂರ್ಣ ಖಾಲಿ ಖಾಲಿ ಆಗಿದೆ. ಶ್ರೀ ರಾಮನ ವಾರ್ಷಿಕೋತ್ಸವದ ಹಿನ್ನಲೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಇದೆ ಎಂದು ಭಾವಿಸಿದ್ದ ಹಲವಾರು ಭಕ್ತರು ವಾಪಸಾಗಿದ್ದಾರೆ. ಅಲ್ಲಿಗೆ ರಾಜಕೀಯ ಮುಖಂಡರಿಗೆ ದೇವರು ಬರಿ ಚುನಾವಣೆ ಸಮಯದಲ್ಲಿ ಮಾತ್ರ ನೆನಪಾಗುವುದು, ಚುನಾವಣೆ ಸಮಯದಲ್ಲಿ ಪೂಜೆ ಪುನಸ್ಕಾರ ಮಾಡುವುದು ಅದನ್ನು ಬಿಟ್ಟರೆ ಮತ್ತೆ ಐದು ವರ್ಷದ ನಂತರ ಎಂದು ಅಲ್ಲಿಗೆ ಆಗಮಿಸಿದ್ದ ಭಕ್ತರು ಹೇಳಿದ್ದಾರೆ. ಕಳೆದ ಬಾರಿ ಕೋದಂಡರಾಮ ದೇವಸ್ಥಾನವನ್ನು ಜೀರ್ಣೋದ್ದಾರ ಮಾಡುತ್ತೇವೆ. ಇಲ್ಲಿಗೂ ಭಕ್ತರು ಆಗಮಿಸಬೇಕು, ಪೂಜೆ ಪುನಸ್ಕಾರ ನಡೆಯಬೇಕು ಎಂದೆಲ್ಲಾ ಹೇಳಿದ್ದರು. ಈಗ ಅದ್ಯಾವುದು ಇಲ್ಲವಾಗಿದೆ.
ಒಟ್ಟಿನಲ್ಲಿ ಚುನಾವಣೆ ಸಮಯದಲ್ಲಿ ರಾಮ ರಾಮ ಎನ್ನುತ್ತಾರೆ ಅದೇ ಒಂದೇ ವರ್ಷದ ನಂತರ ರಾಮನಿಗೆ ನಾಮ ಹಾಕುತ್ತಾರೆ ಎಂದು ರಾಜಕೀಯ ಮುಖಂಡರಿಗೆ ಅಲ್ಲಿನ ಭಕ್ತರೊಬ್ಬರೋ ಆಕ್ರೋಶಭರಿತರಾಗಿ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು