3:03 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯಲ್ಲಿ ವಿಮೆ ಇಲ್ಲದೆ ಓಡಾಡುತ್ತಿರುವ ಸರಕಾರಿ ವಾಹನ: ಸಾರ್ವಜನಿಕರಿಗೊಂದು, ಸರಕಾರಕ್ಕೊಂದು ನ್ಯಾಯ ಸರಿಯೇ? ಸಾರ್ವಜನಿಕರ ಪ್ರಶ್ನೆ

14/08/2024, 16:30

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ವಾಹನ ಓಡಿಸುವಾಗ ಸರಿಯಾದ ದಾಖಲೆಗಳನ್ನು ಇಟ್ಟುಕೊಂಡು ಹೋಗಬೇಕು ಎಂಬುವುದು ಕಾನೂನು, ಆ ಕಾನೂನನ್ನು ಪ್ರತಿಯೊಬ್ಬರು ಚಾಚು ತಪ್ಪದೆ ಮಾಡಲೇಬೇಕು. ವಾಹನಗಳಲ್ಲಿ ಸರಿಯಾದ ದಾಖಲಾತಿ ಇಟ್ಟುಕೊಳ್ಳದೆ ಹೋದರೆ ದಂಡ ಕಟ್ಟಬೇಕಾಗುತ್ತದೆ.
ಹೀಗೆ ಸಾರ್ವಜನಿಕರ ವಾಹನಗಳನ್ನು ತಡೆದು ದಾಖಲಾತಿಗಳನ್ನು ಪರಿಶೀಲನೆ ಮಾಡುವುದು ಸರಿ. ಆದರೆ ಸರ್ಕಾರಿ ವಾಹನಗಳಲ್ಲೇ ದಾಖಲೆ ಕಟ್ಟದಿದ್ದರೆ ಅದಕ್ಕೆ ಹೊಣೆ ಯಾರು? ದಂಡ ಯಾರಿಗೆ ಎಂಬ ಪ್ರೆಶ್ನೆ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.
ಹೌದು, ತೀರ್ಥಹಳ್ಳಿಯ ತಾಲೂಕು ದಂಡಾಧಿಕಾರಿಗಳ ವಾಹನದ ವಿಮೆ (ಇನ್ಶೂರೆನ್ಸ್) 2023ರ ನವೆಂಬರ್ ನಲ್ಲೇ ಮುಗಿದಿದೆ (ಲ್ಯಾಪ್ಸ್ ಆಗಿದೆ) ಇಲ್ಲಿಯವರೆಗೆ ಯಾರು ಕೂಡ ಪ್ರೆಶ್ನೆ ಮಾಡಿಲ್ಲವೇ? ಅಥವಾ ಅದರ ಬಗ್ಗೆ ಯಾರು ಪರಿಶೀಲನೆ ಮಾಡಲಿಲ್ಲವೇ ಎಂಬ ಅನುಮಾನ ಮೂಡಿದೆ. ಪ್ರತಿನಿತ್ಯ ರಸ್ತೆಗಳಲ್ಲಿ ಓಡಾಡುವ ವಾಹನಗಳನ್ನು ತಡೆದು ದಾಖಲೆಗಳನ್ನು ಪರಿಶೀಲನೆ ನಡೆಸುವ ಅಧಿಕಾರಿಗಳು ಸರ್ಕಾರಿ ವಾಹನದ ಬಗ್ಗೆ ಗಮನ ಹರಿಸಲಿಲ್ಲವೇ? ಅಥವಾ ಸರ್ಕಾರಿ ವಾಹನಗಳಲ್ಲಿ ದಾಖಲಾತಿ ಇರದಿದ್ದರೆ ಪರವಾಗಿಲ್ಲವೇ? ರಸ್ತೆಯಲ್ಲಿ ಏನಾದರು ಅವಘಡ ಸಂಭವಿಸಿದರೆ ಯಾರು ಹೊಣೆ? ಎಂಬುದಾಗಿ ಸಾರ್ವಜನಿಕರು ಪ್ರೆಶ್ನೆ ಮಾಡುತ್ತಿದ್ದಾರೆ.
ವಿಷಯ ತಿಳಿದು ತಾಲೂಕು ಕಚೇರಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ವಿಮೆ ನವೀಕರಿಸದಿರುವ ಬಗ್ಗೆ ಕೇಳಿದಾಗ ಇನ್ಶೂರೆನ್ಸ್ ಹಣವನ್ನು ಈಗಾಗಲೇ ಕಟ್ಟಿದ್ದೇವೆ. ಆದರೆ ಬಾಂಡ್ ಇನ್ನೂ ನಮಗೆ ಬಂದಿಲ್ಲ ಎಂದು ಸಂಬಂಧ ಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ. ಅದೇನೇ ಆಗಲಿ ಸರ್ಕಾರಿ ವಾಹನಗಳಿಗೆ ಒಂದು ನ್ಯಾಯ ಸಾರ್ವಜನಿಕರ ವಾಹನಗಳಿಗೆ ಒಂದು ನ್ಯಾಯವೇ? ಅದಕ್ಕೆ ದಂಡ ಇಲ್ಲವೇ? ಹೀಗೆ ಮಾಡುವುದು ಸರಿಯೇ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು