9:39 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯಲ್ಲಿ ವಿಮೆ ಇಲ್ಲದೆ ಓಡಾಡುತ್ತಿರುವ ಸರಕಾರಿ ವಾಹನ: ಸಾರ್ವಜನಿಕರಿಗೊಂದು, ಸರಕಾರಕ್ಕೊಂದು ನ್ಯಾಯ ಸರಿಯೇ? ಸಾರ್ವಜನಿಕರ ಪ್ರಶ್ನೆ

14/08/2024, 16:30

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ವಾಹನ ಓಡಿಸುವಾಗ ಸರಿಯಾದ ದಾಖಲೆಗಳನ್ನು ಇಟ್ಟುಕೊಂಡು ಹೋಗಬೇಕು ಎಂಬುವುದು ಕಾನೂನು, ಆ ಕಾನೂನನ್ನು ಪ್ರತಿಯೊಬ್ಬರು ಚಾಚು ತಪ್ಪದೆ ಮಾಡಲೇಬೇಕು. ವಾಹನಗಳಲ್ಲಿ ಸರಿಯಾದ ದಾಖಲಾತಿ ಇಟ್ಟುಕೊಳ್ಳದೆ ಹೋದರೆ ದಂಡ ಕಟ್ಟಬೇಕಾಗುತ್ತದೆ.
ಹೀಗೆ ಸಾರ್ವಜನಿಕರ ವಾಹನಗಳನ್ನು ತಡೆದು ದಾಖಲಾತಿಗಳನ್ನು ಪರಿಶೀಲನೆ ಮಾಡುವುದು ಸರಿ. ಆದರೆ ಸರ್ಕಾರಿ ವಾಹನಗಳಲ್ಲೇ ದಾಖಲೆ ಕಟ್ಟದಿದ್ದರೆ ಅದಕ್ಕೆ ಹೊಣೆ ಯಾರು? ದಂಡ ಯಾರಿಗೆ ಎಂಬ ಪ್ರೆಶ್ನೆ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.
ಹೌದು, ತೀರ್ಥಹಳ್ಳಿಯ ತಾಲೂಕು ದಂಡಾಧಿಕಾರಿಗಳ ವಾಹನದ ವಿಮೆ (ಇನ್ಶೂರೆನ್ಸ್) 2023ರ ನವೆಂಬರ್ ನಲ್ಲೇ ಮುಗಿದಿದೆ (ಲ್ಯಾಪ್ಸ್ ಆಗಿದೆ) ಇಲ್ಲಿಯವರೆಗೆ ಯಾರು ಕೂಡ ಪ್ರೆಶ್ನೆ ಮಾಡಿಲ್ಲವೇ? ಅಥವಾ ಅದರ ಬಗ್ಗೆ ಯಾರು ಪರಿಶೀಲನೆ ಮಾಡಲಿಲ್ಲವೇ ಎಂಬ ಅನುಮಾನ ಮೂಡಿದೆ. ಪ್ರತಿನಿತ್ಯ ರಸ್ತೆಗಳಲ್ಲಿ ಓಡಾಡುವ ವಾಹನಗಳನ್ನು ತಡೆದು ದಾಖಲೆಗಳನ್ನು ಪರಿಶೀಲನೆ ನಡೆಸುವ ಅಧಿಕಾರಿಗಳು ಸರ್ಕಾರಿ ವಾಹನದ ಬಗ್ಗೆ ಗಮನ ಹರಿಸಲಿಲ್ಲವೇ? ಅಥವಾ ಸರ್ಕಾರಿ ವಾಹನಗಳಲ್ಲಿ ದಾಖಲಾತಿ ಇರದಿದ್ದರೆ ಪರವಾಗಿಲ್ಲವೇ? ರಸ್ತೆಯಲ್ಲಿ ಏನಾದರು ಅವಘಡ ಸಂಭವಿಸಿದರೆ ಯಾರು ಹೊಣೆ? ಎಂಬುದಾಗಿ ಸಾರ್ವಜನಿಕರು ಪ್ರೆಶ್ನೆ ಮಾಡುತ್ತಿದ್ದಾರೆ.
ವಿಷಯ ತಿಳಿದು ತಾಲೂಕು ಕಚೇರಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ವಿಮೆ ನವೀಕರಿಸದಿರುವ ಬಗ್ಗೆ ಕೇಳಿದಾಗ ಇನ್ಶೂರೆನ್ಸ್ ಹಣವನ್ನು ಈಗಾಗಲೇ ಕಟ್ಟಿದ್ದೇವೆ. ಆದರೆ ಬಾಂಡ್ ಇನ್ನೂ ನಮಗೆ ಬಂದಿಲ್ಲ ಎಂದು ಸಂಬಂಧ ಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ. ಅದೇನೇ ಆಗಲಿ ಸರ್ಕಾರಿ ವಾಹನಗಳಿಗೆ ಒಂದು ನ್ಯಾಯ ಸಾರ್ವಜನಿಕರ ವಾಹನಗಳಿಗೆ ಒಂದು ನ್ಯಾಯವೇ? ಅದಕ್ಕೆ ದಂಡ ಇಲ್ಲವೇ? ಹೀಗೆ ಮಾಡುವುದು ಸರಿಯೇ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು