9:02 PM Friday20 - June 2025
ಬ್ರೇಕಿಂಗ್ ನ್ಯೂಸ್
Bangalore | ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ: ರಾಜ್ಯಾದ್ಯಂತ ಪರಿಸರ… Power Minister | ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ; ನೌಕರರ ಬೇಡಿಕೆಗಳಿಗೆ ಸ್ಪಂದನೆ:… ವಿದ್ಯುತ್ ಪ್ರಸರಣ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ: ಮುಖ್ಯಮಂತ್ರಿ… ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇಗುಲದಲ್ಲಿ ಈ ಬಾರಿ ಬಿಕಾಂ ಜಾತ್ರೆ!: ಹಾಗಂದ್ರೆ ಏನು ಗೊತ್ತಾ?

25/12/2024, 19:13

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಅತ್ಯಂತ ವೈಭವದಿಂದ ನಡೆಯಲಿದ್ದು 17 ಲಕ್ಷ ಬಜೆಟ್ ನಲ್ಲಿ ರಥೋತ್ಸವ ಹಾಗೂ ತೆಪ್ಪೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಸಂಚಾಲಕ ಸೊಪ್ಪುಗುಡ್ಡೆ ರಾಘವೇಂದ್ರ ಹೇಳಿದರು.
ಪಟ್ಟಣದ ಅನ್ನಪೂರ್ಣ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮ ಸಹ ನಡೆಯಲಿದೆ. ತೀರ್ಥಸ್ನಾನದ ಸಂಜೆ ಶಮಿತಾ ಮಲ್ನಾಡ್ ಅವರ ಹಾಡು ಹಾಗೂ ನೃತ್ಯ ಕಾರ್ಯಕ್ರಮ ಹಾಗೂ ಉದಯ್ ಶೆಟ್ಟಿ ಅವರ ಕಾರ್ಯಕ್ರಮ ಈ ಬಾರಿ ವಿಶೇಷವಾಗಿ ನಡೆಯಲಿದೆ ಎಂದು ತಿಳಿಸಿದರು.
*ಬಿ ಕಾಂ ಜಾತ್ರೆ ವಿಶೇಷ ಏನು:?*
ಈ ಬಾರಿ ತೆಪ್ಪೋತ್ಸವ ಸಮಿತಿ ಬಿ ಕಾಂ ಸಮಿತಿ ಆಗಿದೆ ಎಂದು ಮತ್ತೊರ್ವ ಸಂಚಾಲಕ ಡಾ. ಸುಂದರೇಶ್ ಹೇಳಿದರು. ಬಿ ಅಂದರೆ ಬಿಜೆಪಿ ಹಾಗೂ ಕಾಂ ಎಂದರೆ ಕಾಂಗ್ರೆಸ್ ಎರಡು ಪಕ್ಷಗಳು ಒಟ್ಟಿಗೆ ಈ ಬಾರಿ ಜಾತ್ರೆಯನ್ನು ಮಾಡುತ್ತಿದೆ. ಈ ಬಾರಿ ಕಳೆದ ಬಾರಿಗಿಂತ ಅತ್ಯಂತ ವೈಭವದಿಂದ ಜಾತ್ರೆ ನಡೆಯಲಿದೆ. ಜಾತ್ರೆಯ ಅಧ್ಯಕ್ಷರು ಶಾಸಕ ಆರಗ ಜ್ಞಾನೇಂದ್ರ, ಉಪಾಧ್ಯಕ್ಷರಾಗಿ ಕಿಮ್ಮನೆ ರತ್ನಾಕರ್ ಹಾಗೂ ಆರ್ ಎಂ ಮಂಜುನಾಥ್ ಗೌಡರು ಇರಲಿದ್ದಾರೆ. ತಹಸೀಲ್ದಾರ್ ಜಾತ್ರೆಯ ನೇತೃತ್ವ ವಹಿಸಲಿದ್ದಾರೆ ಎಂದರು.
ಡಿ. 28ರಿಂದ ಧಾರ್ಮಿಕ ಕಾರ್ಯಕ್ರಮ ಆರಂಭವಾಗಲಿದ್ದು ಡಿ. 30 ರಂದು ತೀರ್ಥಸ್ನಾನ, ಡಿ. 31 ರಂದು ಬ್ರಹ್ಮ ರಥೋತ್ಸವ, ಜ. 1 ರಂದು ಅದ್ದೂರಿ ತೆಪ್ಪೋತ್ಸವ ನಡೆಯಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು