7:10 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇಗುಲದಲ್ಲಿ ಈ ಬಾರಿ ಬಿಕಾಂ ಜಾತ್ರೆ!: ಹಾಗಂದ್ರೆ ಏನು ಗೊತ್ತಾ?

25/12/2024, 19:13

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಅತ್ಯಂತ ವೈಭವದಿಂದ ನಡೆಯಲಿದ್ದು 17 ಲಕ್ಷ ಬಜೆಟ್ ನಲ್ಲಿ ರಥೋತ್ಸವ ಹಾಗೂ ತೆಪ್ಪೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಸಂಚಾಲಕ ಸೊಪ್ಪುಗುಡ್ಡೆ ರಾಘವೇಂದ್ರ ಹೇಳಿದರು.
ಪಟ್ಟಣದ ಅನ್ನಪೂರ್ಣ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮ ಸಹ ನಡೆಯಲಿದೆ. ತೀರ್ಥಸ್ನಾನದ ಸಂಜೆ ಶಮಿತಾ ಮಲ್ನಾಡ್ ಅವರ ಹಾಡು ಹಾಗೂ ನೃತ್ಯ ಕಾರ್ಯಕ್ರಮ ಹಾಗೂ ಉದಯ್ ಶೆಟ್ಟಿ ಅವರ ಕಾರ್ಯಕ್ರಮ ಈ ಬಾರಿ ವಿಶೇಷವಾಗಿ ನಡೆಯಲಿದೆ ಎಂದು ತಿಳಿಸಿದರು.
*ಬಿ ಕಾಂ ಜಾತ್ರೆ ವಿಶೇಷ ಏನು:?*
ಈ ಬಾರಿ ತೆಪ್ಪೋತ್ಸವ ಸಮಿತಿ ಬಿ ಕಾಂ ಸಮಿತಿ ಆಗಿದೆ ಎಂದು ಮತ್ತೊರ್ವ ಸಂಚಾಲಕ ಡಾ. ಸುಂದರೇಶ್ ಹೇಳಿದರು. ಬಿ ಅಂದರೆ ಬಿಜೆಪಿ ಹಾಗೂ ಕಾಂ ಎಂದರೆ ಕಾಂಗ್ರೆಸ್ ಎರಡು ಪಕ್ಷಗಳು ಒಟ್ಟಿಗೆ ಈ ಬಾರಿ ಜಾತ್ರೆಯನ್ನು ಮಾಡುತ್ತಿದೆ. ಈ ಬಾರಿ ಕಳೆದ ಬಾರಿಗಿಂತ ಅತ್ಯಂತ ವೈಭವದಿಂದ ಜಾತ್ರೆ ನಡೆಯಲಿದೆ. ಜಾತ್ರೆಯ ಅಧ್ಯಕ್ಷರು ಶಾಸಕ ಆರಗ ಜ್ಞಾನೇಂದ್ರ, ಉಪಾಧ್ಯಕ್ಷರಾಗಿ ಕಿಮ್ಮನೆ ರತ್ನಾಕರ್ ಹಾಗೂ ಆರ್ ಎಂ ಮಂಜುನಾಥ್ ಗೌಡರು ಇರಲಿದ್ದಾರೆ. ತಹಸೀಲ್ದಾರ್ ಜಾತ್ರೆಯ ನೇತೃತ್ವ ವಹಿಸಲಿದ್ದಾರೆ ಎಂದರು.
ಡಿ. 28ರಿಂದ ಧಾರ್ಮಿಕ ಕಾರ್ಯಕ್ರಮ ಆರಂಭವಾಗಲಿದ್ದು ಡಿ. 30 ರಂದು ತೀರ್ಥಸ್ನಾನ, ಡಿ. 31 ರಂದು ಬ್ರಹ್ಮ ರಥೋತ್ಸವ, ಜ. 1 ರಂದು ಅದ್ದೂರಿ ತೆಪ್ಪೋತ್ಸವ ನಡೆಯಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು