6:14 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇಗುಲದಲ್ಲಿ ಈ ಬಾರಿ ಬಿಕಾಂ ಜಾತ್ರೆ!: ಹಾಗಂದ್ರೆ ಏನು ಗೊತ್ತಾ?

25/12/2024, 19:13

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಅತ್ಯಂತ ವೈಭವದಿಂದ ನಡೆಯಲಿದ್ದು 17 ಲಕ್ಷ ಬಜೆಟ್ ನಲ್ಲಿ ರಥೋತ್ಸವ ಹಾಗೂ ತೆಪ್ಪೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಸಂಚಾಲಕ ಸೊಪ್ಪುಗುಡ್ಡೆ ರಾಘವೇಂದ್ರ ಹೇಳಿದರು.
ಪಟ್ಟಣದ ಅನ್ನಪೂರ್ಣ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮ ಸಹ ನಡೆಯಲಿದೆ. ತೀರ್ಥಸ್ನಾನದ ಸಂಜೆ ಶಮಿತಾ ಮಲ್ನಾಡ್ ಅವರ ಹಾಡು ಹಾಗೂ ನೃತ್ಯ ಕಾರ್ಯಕ್ರಮ ಹಾಗೂ ಉದಯ್ ಶೆಟ್ಟಿ ಅವರ ಕಾರ್ಯಕ್ರಮ ಈ ಬಾರಿ ವಿಶೇಷವಾಗಿ ನಡೆಯಲಿದೆ ಎಂದು ತಿಳಿಸಿದರು.
*ಬಿ ಕಾಂ ಜಾತ್ರೆ ವಿಶೇಷ ಏನು:?*
ಈ ಬಾರಿ ತೆಪ್ಪೋತ್ಸವ ಸಮಿತಿ ಬಿ ಕಾಂ ಸಮಿತಿ ಆಗಿದೆ ಎಂದು ಮತ್ತೊರ್ವ ಸಂಚಾಲಕ ಡಾ. ಸುಂದರೇಶ್ ಹೇಳಿದರು. ಬಿ ಅಂದರೆ ಬಿಜೆಪಿ ಹಾಗೂ ಕಾಂ ಎಂದರೆ ಕಾಂಗ್ರೆಸ್ ಎರಡು ಪಕ್ಷಗಳು ಒಟ್ಟಿಗೆ ಈ ಬಾರಿ ಜಾತ್ರೆಯನ್ನು ಮಾಡುತ್ತಿದೆ. ಈ ಬಾರಿ ಕಳೆದ ಬಾರಿಗಿಂತ ಅತ್ಯಂತ ವೈಭವದಿಂದ ಜಾತ್ರೆ ನಡೆಯಲಿದೆ. ಜಾತ್ರೆಯ ಅಧ್ಯಕ್ಷರು ಶಾಸಕ ಆರಗ ಜ್ಞಾನೇಂದ್ರ, ಉಪಾಧ್ಯಕ್ಷರಾಗಿ ಕಿಮ್ಮನೆ ರತ್ನಾಕರ್ ಹಾಗೂ ಆರ್ ಎಂ ಮಂಜುನಾಥ್ ಗೌಡರು ಇರಲಿದ್ದಾರೆ. ತಹಸೀಲ್ದಾರ್ ಜಾತ್ರೆಯ ನೇತೃತ್ವ ವಹಿಸಲಿದ್ದಾರೆ ಎಂದರು.
ಡಿ. 28ರಿಂದ ಧಾರ್ಮಿಕ ಕಾರ್ಯಕ್ರಮ ಆರಂಭವಾಗಲಿದ್ದು ಡಿ. 30 ರಂದು ತೀರ್ಥಸ್ನಾನ, ಡಿ. 31 ರಂದು ಬ್ರಹ್ಮ ರಥೋತ್ಸವ, ಜ. 1 ರಂದು ಅದ್ದೂರಿ ತೆಪ್ಪೋತ್ಸವ ನಡೆಯಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು