9:29 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇಗುಲದಲ್ಲಿ ಈ ಬಾರಿ ಬಿಕಾಂ ಜಾತ್ರೆ!: ಹಾಗಂದ್ರೆ ಏನು ಗೊತ್ತಾ?

25/12/2024, 19:13

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಅತ್ಯಂತ ವೈಭವದಿಂದ ನಡೆಯಲಿದ್ದು 17 ಲಕ್ಷ ಬಜೆಟ್ ನಲ್ಲಿ ರಥೋತ್ಸವ ಹಾಗೂ ತೆಪ್ಪೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಸಂಚಾಲಕ ಸೊಪ್ಪುಗುಡ್ಡೆ ರಾಘವೇಂದ್ರ ಹೇಳಿದರು.
ಪಟ್ಟಣದ ಅನ್ನಪೂರ್ಣ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮ ಸಹ ನಡೆಯಲಿದೆ. ತೀರ್ಥಸ್ನಾನದ ಸಂಜೆ ಶಮಿತಾ ಮಲ್ನಾಡ್ ಅವರ ಹಾಡು ಹಾಗೂ ನೃತ್ಯ ಕಾರ್ಯಕ್ರಮ ಹಾಗೂ ಉದಯ್ ಶೆಟ್ಟಿ ಅವರ ಕಾರ್ಯಕ್ರಮ ಈ ಬಾರಿ ವಿಶೇಷವಾಗಿ ನಡೆಯಲಿದೆ ಎಂದು ತಿಳಿಸಿದರು.
*ಬಿ ಕಾಂ ಜಾತ್ರೆ ವಿಶೇಷ ಏನು:?*
ಈ ಬಾರಿ ತೆಪ್ಪೋತ್ಸವ ಸಮಿತಿ ಬಿ ಕಾಂ ಸಮಿತಿ ಆಗಿದೆ ಎಂದು ಮತ್ತೊರ್ವ ಸಂಚಾಲಕ ಡಾ. ಸುಂದರೇಶ್ ಹೇಳಿದರು. ಬಿ ಅಂದರೆ ಬಿಜೆಪಿ ಹಾಗೂ ಕಾಂ ಎಂದರೆ ಕಾಂಗ್ರೆಸ್ ಎರಡು ಪಕ್ಷಗಳು ಒಟ್ಟಿಗೆ ಈ ಬಾರಿ ಜಾತ್ರೆಯನ್ನು ಮಾಡುತ್ತಿದೆ. ಈ ಬಾರಿ ಕಳೆದ ಬಾರಿಗಿಂತ ಅತ್ಯಂತ ವೈಭವದಿಂದ ಜಾತ್ರೆ ನಡೆಯಲಿದೆ. ಜಾತ್ರೆಯ ಅಧ್ಯಕ್ಷರು ಶಾಸಕ ಆರಗ ಜ್ಞಾನೇಂದ್ರ, ಉಪಾಧ್ಯಕ್ಷರಾಗಿ ಕಿಮ್ಮನೆ ರತ್ನಾಕರ್ ಹಾಗೂ ಆರ್ ಎಂ ಮಂಜುನಾಥ್ ಗೌಡರು ಇರಲಿದ್ದಾರೆ. ತಹಸೀಲ್ದಾರ್ ಜಾತ್ರೆಯ ನೇತೃತ್ವ ವಹಿಸಲಿದ್ದಾರೆ ಎಂದರು.
ಡಿ. 28ರಿಂದ ಧಾರ್ಮಿಕ ಕಾರ್ಯಕ್ರಮ ಆರಂಭವಾಗಲಿದ್ದು ಡಿ. 30 ರಂದು ತೀರ್ಥಸ್ನಾನ, ಡಿ. 31 ರಂದು ಬ್ರಹ್ಮ ರಥೋತ್ಸವ, ಜ. 1 ರಂದು ಅದ್ದೂರಿ ತೆಪ್ಪೋತ್ಸವ ನಡೆಯಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು