7:58 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಮಕ್ಕಳ ಹಾಸ್ಟೆಲ್ ಊಟದಲ್ಲಿ ಹುಳ ಪ್ರತ್ಯಕ್ಷ: ಸೊಪ್ಪು, ಬೆಂಡೆಕಾಯಿ ಸಾಂಬಾರ್ ನಲ್ಲೂ ಹುಳ!

26/09/2024, 12:11

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಹಾಸ್ಟೆಲ್ ವೊಂದರ ಮಕ್ಕಳು ಊಟ ಮಾಡುವ ಊಟದಲ್ಲಿ ಹುಳ ಪ್ರತ್ಯಕ್ಷವಾಗಿದ್ದು ಅದನ್ನು ನೋಡಿದ ಮಕ್ಕಳು ಊಟವನ್ನು ಚೆಲ್ಲಿದ ಘಟನೆ ನಡೆದಿದೆ.
ಪಟ್ಟಣದ ಜೂನಿಯರ್ ಕಾಲೇಜು ಸಮೀಪದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿ ಪರ ಬಾಲಕರ ವಿದ್ಯಾರ್ಥಿ ನಿಲಯದ ಹಾಸ್ಟೆಲ್ ನಲ್ಲಿ ಬುಧವಾರ ರಾತ್ರಿ ಊಟಕ್ಕೆ ಕುಳಿತ ವಿದ್ಯಾರ್ಥಿಗಳಿಗೆ ಅನ್ನ ಹಾಗೂ ಸಾಂಬಾರ್ ನಲ್ಲಿ ಹುಳ ಕಂಡಿವೆ. ತಕ್ಷಣ ಅಲ್ಲಿನ ವಾರ್ಡನ್ ಬಳಿ ಮಾಹಿತಿ ನೀಡಿ ಊಟವನ್ನು ಮಾಡದೆ 70 ಜನ ಮಕ್ಕಳು ಊಟ ಚೆಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸರ್ಕಾರ ನೀಡಿದ್ದ ಅಕ್ಕಿಯಲ್ಲಿ ಹುಳ ಆಗಿತ್ತಾ? ಅಥವಾ ಅದನ್ನು ಅಡುಗೆ ಮಾಡುವ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿಗಳು ಗಮನಿಸಲಿಲ್ಲವೇ? ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕಾದ ಅಲ್ಲಿನ ಸಿಬ್ಬಂದಿಗಳು ನಿರ್ಲಕ್ಷ್ಯತನ ತೋರಿಸಿದ್ದಾರಾ? ಎಂಬ ಅನುಮಾನ ವ್ಯಕ್ತವಾಗಿದೆ.


ನಿನ್ನೆ ಸೊಪ್ಪಿನ ಸಾಂಬಾರ್ ನಲ್ಲೂ ಹುಳ ಇತ್ತು ಎಂದು ಹೇಳಲಾಗುತ್ತಿದ್ದು ಇಂದು ಬೆಂಡೆಕಾಯಿ ಸಾಂಬಾರ್ ನಲ್ಲೂ ಹುಳ ಕಂಡಿದೆ. ಸುಮಾರು 70ಕ್ಕೂ ಹೆಚ್ಚು ಮಕ್ಕಳು ಬುಧವಾರ ಹಾಸ್ಟೆಲ್ ನಲ್ಲಿ ಇದ್ದು ಮಕ್ಕಳ ಆರೋಗ್ಯವನ್ನು ಲೆಕ್ಕಿಸದೆ ಈ ರೀತಿ ನಿರ್ಲಕ್ಷ್ಯತನ ವಹಿಸಿರುವುದು ಸರಿಯಲ್ಲ ಎಂಬ ಮಾತು ಸಾರ್ವಜನಿಕರಿಂದ ಕೇಳಿಬಂದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸಂಬಂಧ ಪಟ್ಟ ಅಧಿಕಾರಿಗಳಾದ ಆಶಾಲತಾ ಅವರು ತಕ್ಷಣ ಸ್ಥಳಕ್ಕೆ ಬೇಟಿ ಮಾಡಿ ಕ್ರಮ ಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು