8:48 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯ ಮಕ್ಕಳ ಹಾಸ್ಟೆಲ್ ಊಟದಲ್ಲಿ ಹುಳ ಪ್ರತ್ಯಕ್ಷ: ಸೊಪ್ಪು, ಬೆಂಡೆಕಾಯಿ ಸಾಂಬಾರ್ ನಲ್ಲೂ ಹುಳ!

26/09/2024, 12:11

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಹಾಸ್ಟೆಲ್ ವೊಂದರ ಮಕ್ಕಳು ಊಟ ಮಾಡುವ ಊಟದಲ್ಲಿ ಹುಳ ಪ್ರತ್ಯಕ್ಷವಾಗಿದ್ದು ಅದನ್ನು ನೋಡಿದ ಮಕ್ಕಳು ಊಟವನ್ನು ಚೆಲ್ಲಿದ ಘಟನೆ ನಡೆದಿದೆ.
ಪಟ್ಟಣದ ಜೂನಿಯರ್ ಕಾಲೇಜು ಸಮೀಪದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ಡಾ. ಬಿ. ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿ ಪರ ಬಾಲಕರ ವಿದ್ಯಾರ್ಥಿ ನಿಲಯದ ಹಾಸ್ಟೆಲ್ ನಲ್ಲಿ ಬುಧವಾರ ರಾತ್ರಿ ಊಟಕ್ಕೆ ಕುಳಿತ ವಿದ್ಯಾರ್ಥಿಗಳಿಗೆ ಅನ್ನ ಹಾಗೂ ಸಾಂಬಾರ್ ನಲ್ಲಿ ಹುಳ ಕಂಡಿವೆ. ತಕ್ಷಣ ಅಲ್ಲಿನ ವಾರ್ಡನ್ ಬಳಿ ಮಾಹಿತಿ ನೀಡಿ ಊಟವನ್ನು ಮಾಡದೆ 70 ಜನ ಮಕ್ಕಳು ಊಟ ಚೆಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸರ್ಕಾರ ನೀಡಿದ್ದ ಅಕ್ಕಿಯಲ್ಲಿ ಹುಳ ಆಗಿತ್ತಾ? ಅಥವಾ ಅದನ್ನು ಅಡುಗೆ ಮಾಡುವ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿಗಳು ಗಮನಿಸಲಿಲ್ಲವೇ? ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕಾದ ಅಲ್ಲಿನ ಸಿಬ್ಬಂದಿಗಳು ನಿರ್ಲಕ್ಷ್ಯತನ ತೋರಿಸಿದ್ದಾರಾ? ಎಂಬ ಅನುಮಾನ ವ್ಯಕ್ತವಾಗಿದೆ.


ನಿನ್ನೆ ಸೊಪ್ಪಿನ ಸಾಂಬಾರ್ ನಲ್ಲೂ ಹುಳ ಇತ್ತು ಎಂದು ಹೇಳಲಾಗುತ್ತಿದ್ದು ಇಂದು ಬೆಂಡೆಕಾಯಿ ಸಾಂಬಾರ್ ನಲ್ಲೂ ಹುಳ ಕಂಡಿದೆ. ಸುಮಾರು 70ಕ್ಕೂ ಹೆಚ್ಚು ಮಕ್ಕಳು ಬುಧವಾರ ಹಾಸ್ಟೆಲ್ ನಲ್ಲಿ ಇದ್ದು ಮಕ್ಕಳ ಆರೋಗ್ಯವನ್ನು ಲೆಕ್ಕಿಸದೆ ಈ ರೀತಿ ನಿರ್ಲಕ್ಷ್ಯತನ ವಹಿಸಿರುವುದು ಸರಿಯಲ್ಲ ಎಂಬ ಮಾತು ಸಾರ್ವಜನಿಕರಿಂದ ಕೇಳಿಬಂದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸಂಬಂಧ ಪಟ್ಟ ಅಧಿಕಾರಿಗಳಾದ ಆಶಾಲತಾ ಅವರು ತಕ್ಷಣ ಸ್ಥಳಕ್ಕೆ ಬೇಟಿ ಮಾಡಿ ಕ್ರಮ ಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು